ಕರಾವಳಿ

ವಿಶ್ವ ಆತ್ಮಹತ್ಯೆ ತಡೆ ದಿನ; ಕ್ರಿಯಾಶೀಲ ಬದುಕಿನ ತಂತ್ರವೇ ಆತ್ಮಹತ್ಯೆ ತಡೆಯುವ ಮಂತ್ರ



ಮಂಗಳೂರು: ಇಂದಿನ ಯುವಜನತೆ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಉದ್ದೇಶ, ಗುರಿಯನ್ನು ಈಡೇರಿಸಿಕೊಳ್ಳುವ ಧಾವಂತದಲ್ಲಿ ಕೆಲವೊಮ್ಮೆ ಮಾನಸಿಕ ಒತ್ತಡಕ್ಕೆ ಒಳಗಾಗಿ ಅಮೂಲ್ಯ ಬದುಕನ್ನು ಕೊನೆಗೊಳಿಸುವ ಯೋಚನೆಗೆ ಒಳಗಾಗುತ್ತಾರೆ. ತನ್ನ ಕೆಲಸದಲ್ಲಿ ಆದ ಸೋಲನ್ನೆ ಜೀವನದ ಸೋಲು ಎಂಬುದಾಗಿ ಭಾವಿಸಿಕೊಂಡು ಅತಂತ್ರ ಮನಸ್ಥಿತಿಯನ್ನು ನಿರ್ಮಿಸಿಕೊಂಡು ಆತ್ಮಹತ್ಯೆಯ ಕಡೆ ಹೆಜ್ಜೆ ಹಾಕುತ್ತಿರುವುದು ಆರೋಗ್ಯ ಪೂರ್ಣ ವ್ಯಕ್ತಿತ್ವದ ಲಕ್ಷಣವಲ್ಲ. ಇದರಿಂದ ಹೊರಗೆ ಬರಬೇಕಾದರೆ ನಾವು ಸುವಿಚಾರಗಳನ್ನು ಬೆಳೆಸಿಕೊಂಡು ಸೃಜನಶೀಲ ಯೋಜನೆಗಳನ್ನು ಬದುಕಿನಲ್ಲಿ ಹಾಕಿ ಕೊಳ್ಳಬೇಕು. ಆತ್ಮಹತ್ಯೆಯೇ ಎಲ್ಲಾ ಸಮಸ್ಯೆಗಳ ಪರಿಹಾರವಲ್ಲ ಎಂಬ ಸತ್ಯವನ್ನು ಅರಿತುಕೊಳ್ಳಬೇಕು. ಎಂದು ಕೆನರಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಎಂ ಪದ್ಮನಾಭ ಪೈಗಳು ಹೇಳಿದರು.

ಕೆನರಾ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಮಾವೇಶಗೊಂಡ ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಜಾಥವನ್ನು ಉದ್ದೇಶಿಸಿ ಮಾತನಾಡಿದರು ಕೆನರಾ ಪ್ರೌಢಶಾಲೆಗಳುಹಾಗೂ ಪದವಿ ಪೂರ್ವ, ಪದವಿ ಕಾಲೇಜುಗಳ ಆವರಣದಿಂದ ಹೊರಟ ಜಾಥವು ನಗರದ ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ , ನವ ಭಾರತ ವೃತ್ತ, ಬಂಟ್ಸ್ ಹಾಸ್ಟೆಲ್ ವೃತ್ತ, ಮಹಾತ್ಮ ಗಾಂಧಿ ರಸ್ತೆಯಾಗಿ ಕೆನರಾ ಪದವಿಕಾಲೇಜು ಆವರಣದಲ್ಲಿ ಸಮಾವೇಶಗೊಂಡಿತು.


ಕೆನರಾ ಹೈಸ್ಕೂಲ್ ಸಿಬಿಎಸ್ ಇಲ್ಲಿಯ ಆಪ್ತ ಸಮಾಲೋಚಕಿ ಶ್ರೀಮತಿ ಮಮತಾ ಭಂಡಾರಿ ಆತ್ಮಹತ್ಯೆ ತಡೆ ದಿನದ ಮಹತ್ವದ ಕುರಿತು ಮಾತನಾಡುತ್ತಾ ಬಾಹ್ಯ ಮತ್ತು ಆಂತರಿಕ ಪ್ರಲೋಭನೆಗಳು ಆತ್ಮಹತ್ಯೆಗೆ ಮುಖ್ಯ ಕಾರಣವಾಗುತ್ತಿವೆ. ಅವುಗಳನ್ನು ಸರಿಯಾದ ಕ್ರಮದಲ್ಲಿ ನಿಭಾಯಿಸಿಕೊಂಡಾಗ ಈ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಆತ್ಮಹತ್ಯೆಯನ್ನು ಹೊರ ತಾದ ಶ್ರೇಷ್ಠ ಜೀವನ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ, ಮುಖ್ಯವಾಗಿ ಯುವ ಸಮುದಾಯದಲ್ಲಿ ಅರಿವನ್ನು ಮೂಡಿಸಬೇಕಾಗಿದೆ. ಬೀದಿ ನಾಟಕಗಳು, ಜಾಗೃತಿ ಕಾರ್ಯಕ್ರಮಗಳು, ಸೃಜನಶೀಲ ಚಟುವಟಿಕೆಗಳಿಂದ ಆತ್ಮಹತ್ಯೆಯನ್ನು ತಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಹೆಚ್ಚು ಚಿಂತಿತರಾಗಬೇಕು ಎಂದು ಹೇಳಿದರು.


ಕೆನರಾ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನಸಿಕ ಒತ್ತಡಗಳು, ನಿರುದ್ಯೋಗ, ವರದಕ್ಷಿಣೆ ಪ್ರಚೋದಿತ ಆತ್ಮಹತ್ಯೆ ಇವುಗಳ ಕಾರಣಗಳು ಮತ್ತು ಪರಿಹಾರ ಕ್ರಮಗಳ ಕುರಿತು ಬೀದಿ ನಾಟಕ ಪ್ರದರ್ಶನಗೊಂಡಿತು. ಮಾನಸಿಕ ಸ್ವಾಸ್ಥ್ಯವನ್ನು ಬೆಳೆಸಿಕೊಳ್ಳಲು ಪೂರಕ ವಾತಾವರಣ ರೂಪಿಸುವ ಬಗ್ಗೆ, ಒತ್ತಡಗಳು ಬಂದಾಗ ಅವುಗಳನ್ನು ನಿಭಾಯಿಸುವ, ಆತ್ಮಹತ್ಯೆಯನ್ನು ಹೊರತುಪಡಿಸಿದ ಪರಿಹಾರ ಕ್ರಮಗಳ ಬಗೆಗಿನ ಚಿಂತನೆ ಮಾಡುವ ದೃಷ್ಟಿಕೋನದ ಬಗ್ಗೆ ಬೀದಿ ನಾಟಕದ ಪಾತ್ರಗಳ ಮೂಲಕ ಅರಿವು ಮೂಡಿಸಲಾಯಿತು.


ಕೆನರಾ ಆಡಳಿತ ಮಂಡಳಿಯ ಸಹಖಜಾಂಚಿ ಶ್ರೀ ಜಗನ್ನಾಥ್ ಕಾಮತ್, ಜಂಟಿ ಕಾರ್ಯದರ್ಶಿಗಳಾದ ಶ್ರೀ ಸುರೇಶ್ ಕಾಮತ್ ಹಾಗೂ ಶ್ರೀ ಗೋಪಾಲಕೃಷ್ಣ ಶೆಣೈ, ಕೆನರಾ ವಿಕಾಸ ಕಾಲೇಜಿನ ಸಂಯೋಜಕರಾದ ಶ್ರೀ ಬಸ್ತಿ ಪುರುಷೋತ್ತಮ ಶೆಣೈ, ಕೆನರಾ ಪದವಿ ಕಾಲೇಜಿನ ಮ್ಯಾನೇಜರ್ ಶ್ರೀ ಶಿವಾನಂದ ಶೆಣೈ, ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ನರೇಶ್ ಶೆಣೈ, ಕೆನರಾ ಆಂಗ್ಲ ಪ್ರಾಥಮಿಕ ಶಾಲೆ ಹಾಗೂ ಕೆನರಾ ಹೈಸ್ಕೂಲ್ ಉರ್ವಾ ಇಲ್ಲಿಯ ಮ್ಯಾನೇಜರ್ ಶ್ರೀ ಯೋಗೀಶ್ ಕಾಮತ್, ಆಡಳಿತ ಅಧಿಕಾರಿ ಡಾ. ದೀಪ್ತಿ ನಾಯಕ್, ಪಿ ಆರ್ ಓ ಶ್ರೀಮತಿ ಉಜ್ವಲ್ ಮಲ್ಯ, ಕೆನರಾ ಸಹೋದರಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರುಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಈ ಕಾರ್ಯಕ್ರಮದಲ್ಲಿ ಸಹಭಾಗಿಗಳಾಗಿದ್ದರು.


ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…

15 hours ago

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…

15 hours ago

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

3 days ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

3 days ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

3 days ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

4 days ago