ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 21,763 ಪ್ರಕರಣಗಳು ದಾಖಲು; 1 7.97 ಲಕ್ಷ ರೂ.ಪರಿಹಾರ ವಸೂಲು

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳ ಆವರಣದಲ್ಲಿ ನಡೆದಿದೆ.


ಒಟ್ಟು 48 ಬೈಠಕ್‍ಗಳು ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 21,763 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 14,840 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 17,97,64,778 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದ್ದಾರೆ.

ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!