ಜನ ಮನದ ನಾಡಿ ಮಿಡಿತ

Advertisement

ಬಿ.ಕೆ ಹರಿಪಸ್ರಾದ್ ವಿರುದ್ಧ ಅಸಮಾಧಾನ ಹೊರ ಹಾಕಿದ ಸಿದ್ದರಾಮಯ್ಯ

ಪದೇ ಪದೇ ಬಿ.ಕೆ ಹರಿಪ್ರಸಾದ್ ಅವರು ವೈಯಕ್ತಿಕವಾಗಿ ಟೀಕೆ ಮಾಡುವ ಮೂಲಕ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ನಡೆದ ಈಡಿಗ ಸಮುದಾಯದ ಸಭೆಯಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ರು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ. ಬಹಿರಂಗವಾಗಿ ಹೇಳಿಕೆಗಳನ್ನ ನೀಡುವ ಮೂಲಕ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದಾರೆ.ಅಲ್ಲದೇ ಎಐಸಿಸಿ ನಾಯಕರಿಗೆ ದೂರವಾಣಿ ಕರೆ ಮಾಡುವ ಮೂಲಕ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣ್​ದೀಪ್​ ಸಿಂಗ್​ ಸುರ್ಜೇವಾಲ ಅವರಿಗೆ ಕರೆ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಬಹಿರಂಗ ವೇದಿಕೆಗಳಲ್ಲಿ ನನ್ನನ್ನೇ ಟಾರ್ಗೆಟ್ ಮಾಡಿ ಮಾತನ್ನಾಡುತ್ತಿರುವುದು ಸರಿಯಲ್ಲ. ಏನೇ ಅಸಮಾಧಾನ ಇದ್ದರೂ ಪಕ್ಷದ ವೇದಿಕೆಗಳಲ್ಲಿ ಮಾತನಾಡಬೇಕು. ಅದನ್ನ ಬಿಟ್ಟು ಮಾಧ್ಯಮಗಳ ಮುಂದೆ ಹೀಗೆ ಹೇಳಿಕೆ ನೀಡುವುದು ಸರಿಯಲ್ಲ. ಹಿರಿಯ ನಾಯಕರು ಎನಿಸಿಕೊಂಡವರೇ ಹೀಗೆ ಮಾತನ್ನಾಡಿದ್ರೆ ಹೇಗೆ. ಮೊದಲು ಹೇಳಿಕೆಗಳನ್ನ ನೀಡದಂತೆ ಸ್ಪಷ್ಟ ಸೂಚನೆ ಕೊಡಿ ಎಂದು ಕೋಪದಿಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!