ಚಿಕ್ಕಮಗಳೂರು ಕೊಪ್ಪ ಹಾಸ್ಟೆಲ್ ನಲ್ಲಿ ಇದ್ದು ಕಾಲೇಜು ಓದುತ್ತಿದ್ದ ಹಿಂದೂ ಹುಡುಗಿಯೊಬ್ಬಳು ಮೂವರು ಮುಸ್ಲಿಂ ಹುಡುಗರೊಂದಿಗೆ ಕೊಪ್ಪದ ಕಾಡಿನಲ್ಲಿ ಪತ್ತೆಯಾದ ವಿಚಾರವೊಂದು ಸಾಕಷ್ಟು ವೈರಲ್ ಆಗಿತ್ತು. ಈ ಬೆನ್ನಲ್ಲೇ ಈ ವಿಚಾರವಾಗಿ ಚಿಕ್ಕಮಗಳೂರು SP ಕೂಡ ಸ್ಪಷ್ಟೀಕರಣ ನೀಡಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದಿದ್ದರು. ಆದರೀಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೌದು, ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ ವೈರಲ್ ಆಗುತ್ತಿರುವ ಕಳಸ ಕಾಲೇಜಿನ ಓರ್ವ ಹಿಂದು ಯುವತಿ ಹಾಗೂ ಮೂವರು ಮುಸ್ಲಿಂ ಯುವಕರು ಕೊಪ್ಪ ಕಾಡಿನಲ್ಲಿ ಸಿಕ್ಕರು. ದೆಹಲಿ ರಿಜಿಸ್ಟ್ರೇಶನ್ ಹೊಂದಿರುವ ಸ್ವಿಫ್ಟ್ ಕಾರೊಂದರಲ್ಲಿ ಯುವತಿ ಹಾಗೂ ಮೂವರು ಯುವಕರು ಬಂದಿದ್ದರು. ಏನು ಸಮಸ್ಯೆ ಆಗಿಲ್ಲ ಎಂದು SP ಹೇಳಿದ್ದರು. ಆದರೀಗ ಇಲ್ಲಿ ನೈತಿಕ ಪೋಲೀಸ್ ಗಿರಿ ನಡೆದಿದೆ ಎನ್ನಲಾಗಿದ್ದು ಆ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಪೋಲಿಸರೇ ಮುಚ್ಚಿಟ್ಟಿದ್ದರು ಎನ್ನವಾಗಿತ್ತು. ಸದ್ಯ ಅದು ಸದ್ಯ ಬಟಾಬಯಲಾಗಿದೆ.ಅಂದಹಾಗೆ ಮುಸ್ಲಿಂ ಯುವಕರ ಜೊತೆ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ತಡೆದು ಹಿಂದೂ ಪರ ಸಂಘಟನೆಗಳು ಹಲ್ಲೆಗೆ ಯತ್ನಿಸಿದ್ದವು. ಯುವತಿಯ ಫೋಟೋ ಕೂಡ ವೈರಲ್ ಆಗಿತ್ತು. ಇದರ ಈ ಬೆನ್ನಲ್ಲೇ ಆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೋಟೋಸ್ ವೈರಲ್ ಆದ ಬೆನ್ನಲ್ಲೇ ಅವಮಾನ ತಾಳಲಾರದೆ ವಿದ್ಯಾರ್ಥಿನಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಕೊಪ್ಪ ಸರ್ಕಾರಿ ಪಿಯು ಕಾಲೇಜಿನಲ್ಲಿ ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಭಾನುಮತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಇತ್ತ ಕೊಪ್ಪ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಫೋಟೋ ವೈರಲ್ ಆಗಿದ್ದ ವೇಳೆ ಪೋಲಿಸರೇ ನೈಜ ಘಟನೆಯನ್ನು ತಳ್ಳಿಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…