ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಗಣಪತಿ ಕೂರಿಸೋ ವಿಷಯದಲ್ಲಿ ವಿವಾದವೊಂದು ಭುಗಿಲೆದ್ದಿದೆ. ಈ ವಿವಾದಕ್ಕೆ ಮುಖ್ಯ ಕಾರಣ ಗಣಪನನ್ನು ಕೂರಿಸುವ ಜಾಗ, ಖರ್ಚು ವೆಚ್ಚಕ್ಕೆ ತಗಲೋ ಹಣ ಎಲ್ಲಿಂದ? ಎನ್ನುವುದಾಗಿದೆ.

ಮಂಗಳೂರು ವಿವಿಯಲ್ಲಿ ಕಳೆದ 40 ವರ್ಷಗಳಿಂದ ಗಣೇಶೋತ್ಸವ ನಡೀತಾ ಇದೆ. ಮಂಗಳಾ ಆಡಿಟೋರಿಯಂನಲ್ಲೇ ಗಣೇಶ ಮೂರ್ತಿ ಸ್ಥಾಪನೆ ಮಾಡಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿಯ ಗಣೇಶೋತ್ಸವ ಆಚರಣೆಗೆ ಮಂಗಳಾ ಆಡಿಟೋರಿಯಲ್ಲಿ ಸ್ಥಾಪನೆ ಬೇಡ ಎಂದು ತಕರಾರು ಎದ್ದಿದೆ.
ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸೆ.19ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಸಿದ್ಧ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ನಮಗೆ ಈಗ ಸಮಸ್ಯೆ ಬಂದಿರುವುದು ಕಾಂಗ್ರೆಸ್ ನಿಂದ ಕಾಂಗ್ರೆಸ್ ನಮ್ಮನ್ನ , ಹೇಡಿಗಳನ್ನಾಗಿ ಮಾಡಿತು. ಈಗಲೂ ಪಾಕಿಸ್ತಾನ ಜಿಂದಾಬಾದ್ ಹೇಳುವವರು ಇದಾರೆ. ಅವರಿಗೆ ಕುಮ್ಮಕ್ಕು ಕೊಡುವವರು ಇದ್ದಾರೆ. ನಾವು ಸೆಪ್ಟೆಂಬರ್ 19 ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ ಎಂದು ಮಂಗಳೂರು ವಿವಿ ಉಪಕುಲಪತಿ ನಡೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.



