ಜನ ಮನದ ನಾಡಿ ಮಿಡಿತ

Advertisement

“ಸೆ. 19 ರಂದು ಮಂಗಳೂರು ವಿ.ವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ”; ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಸವಾಲ್‌

ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಗಣಪತಿ ಕೂರಿಸೋ ವಿಷಯದಲ್ಲಿ ವಿವಾದವೊಂದು ಭುಗಿಲೆದ್ದಿದೆ. ಈ ವಿವಾದಕ್ಕೆ ಮುಖ್ಯ ಕಾರಣ ಗಣಪನನ್ನು ಕೂರಿಸುವ ಜಾಗ, ಖರ್ಚು ವೆಚ್ಚಕ್ಕೆ ತಗಲೋ ಹಣ ಎಲ್ಲಿಂದ? ಎನ್ನುವುದಾಗಿದೆ.

ಮಂಗಳೂರು ವಿವಿಯಲ್ಲಿ ಕಳೆದ 40 ವರ್ಷಗಳಿಂದ ಗಣೇಶೋತ್ಸವ ನಡೀತಾ ಇದೆ. ಮಂಗಳಾ ಆಡಿಟೋರಿಯಂನಲ್ಲೇ ಗಣೇಶ ಮೂರ್ತಿ ಸ್ಥಾಪನೆ ಮಾಡಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿಯ ಗಣೇಶೋತ್ಸವ ಆಚರಣೆಗೆ ಮಂಗಳಾ ಆಡಿಟೋರಿಯಲ್ಲಿ ಸ್ಥಾಪನೆ ಬೇಡ ಎಂದು ತಕರಾರು ಎದ್ದಿದೆ.


ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸೆ.19ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಸಿದ್ಧ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದ್ದಾರೆ.


ನಮಗೆ ಈಗ ಸಮಸ್ಯೆ ಬಂದಿರುವುದು ಕಾಂಗ್ರೆಸ್ ನಿಂದ ಕಾಂಗ್ರೆಸ್ ನಮ್ಮನ್ನ , ಹೇಡಿಗಳನ್ನಾಗಿ ಮಾಡಿತು. ಈಗಲೂ ಪಾಕಿಸ್ತಾನ ಜಿಂದಾಬಾದ್ ಹೇಳುವವರು ಇದಾರೆ. ಅವರಿಗೆ ಕುಮ್ಮಕ್ಕು ಕೊಡುವವರು ಇದ್ದಾರೆ. ನಾವು ಸೆಪ್ಟೆಂಬರ್ 19 ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ ಎಂದು ಮಂಗಳೂರು ವಿವಿ ಉಪಕುಲಪತಿ ನಡೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!