ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಬಹಳ ನಷ್ಟ ಉಂಟಾಗಿದ್ದು, ಇದಕ್ಕೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಪೂರೈಸಬೇಕೆಂದು ಒತ್ತಾಯಿಸಿ, ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಷ್ಕರವನ್ನು ನಾಳೆ ಕೈಗೊಂಡಿದೆ.
ಇಂದು ರಾತ್ರಿಯಿಂದಲೇ ಈ ಸಾರಿಗೆ ಬಂದ್ ಆಗಲಿದ್ದು, ಕೆಲವು ಖಾಸಗಿ ಶಾಲೆಗಳಿಗೆ ಸೋಮವಾರ ಬೆಂಗಳೂರಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಬಂದ್ಗೆ ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿದ್ದು, ಶಾಲಾ ಮಕ್ಕಳಿಗೆ ಹೋಗಲು ತೊಂದರೆಯಾಗುವುದರಿಂದ ಬೆಂಗಳೂರಿನ ಆರ್ಕಿಡ್ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿದೆ.
ಸರಕು ಸಾಗಣೆ ವಾಹನ, ಶಾಲಾ ವಾಹನ, ಟ್ಯಾಕ್ಸಿ, ಖಾಸಗಿ ಬಸ್, ಓಲಾ, ಉಬರ್, ಆಟೋ ಸೋಮವಾರ ರಸ್ತೆಗಿಳಿಯುವುದಿಲ್ಲ. ಅನೇಕ ಶಾಲೆಗಳು ರಜೆ ಘೋಷಣೆ ಮಾಡಿದ್ದು, ಹಾಗೆ ಮತ್ತಷ್ಟು ಶಾಲೆಗಳು ರಜೆ ಘೋಷಣೆ ಮಾಡಲಿದೆ ಎಂದು ಒಕ್ಕೂಟದ ಪ್ರಮುಖ ಜಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನೂ ಕರ್ನಾಟಕ ಖಾಸಗಿ ಶಾಲಾ ವಾಹನಗಳ ಯೂನಿಯನ್ ವತಿಯಿಂದ ಖಾಸಗಿ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…