ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಬಹಳ ನಷ್ಟ ಉಂಟಾಗಿದ್ದು, ಇದಕ್ಕೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಪೂರೈಸಬೇಕೆಂದು ಒತ್ತಾಯಿಸಿ, ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಷ್ಕರವನ್ನು ನಾಳೆ ಕೈಗೊಂಡಿದೆ.
ಇಂದು ರಾತ್ರಿಯಿಂದಲೇ ಈ ಸಾರಿಗೆ ಬಂದ್ ಆಗಲಿದ್ದು, ಕೆಲವು ಖಾಸಗಿ ಶಾಲೆಗಳಿಗೆ ಸೋಮವಾರ ಬೆಂಗಳೂರಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಬಂದ್ಗೆ ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿದ್ದು, ಶಾಲಾ ಮಕ್ಕಳಿಗೆ ಹೋಗಲು ತೊಂದರೆಯಾಗುವುದರಿಂದ ಬೆಂಗಳೂರಿನ ಆರ್ಕಿಡ್ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿದೆ.
ಸರಕು ಸಾಗಣೆ ವಾಹನ, ಶಾಲಾ ವಾಹನ, ಟ್ಯಾಕ್ಸಿ, ಖಾಸಗಿ ಬಸ್, ಓಲಾ, ಉಬರ್, ಆಟೋ ಸೋಮವಾರ ರಸ್ತೆಗಿಳಿಯುವುದಿಲ್ಲ. ಅನೇಕ ಶಾಲೆಗಳು ರಜೆ ಘೋಷಣೆ ಮಾಡಿದ್ದು, ಹಾಗೆ ಮತ್ತಷ್ಟು ಶಾಲೆಗಳು ರಜೆ ಘೋಷಣೆ ಮಾಡಲಿದೆ ಎಂದು ಒಕ್ಕೂಟದ ಪ್ರಮುಖ ಜಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನೂ ಕರ್ನಾಟಕ ಖಾಸಗಿ ಶಾಲಾ ವಾಹನಗಳ ಯೂನಿಯನ್ ವತಿಯಿಂದ ಖಾಸಗಿ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…