ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಬಹಳ ನಷ್ಟ ಉಂಟಾಗಿದ್ದು, ಇದಕ್ಕೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಪೂರೈಸಬೇಕೆಂದು ಒತ್ತಾಯಿಸಿ, ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಷ್ಕರವನ್ನು ನಾಳೆ ಕೈಗೊಂಡಿದೆ.
ಇಂದು ರಾತ್ರಿಯಿಂದಲೇ ಈ ಸಾರಿಗೆ ಬಂದ್ ಆಗಲಿದ್ದು, ಕೆಲವು ಖಾಸಗಿ ಶಾಲೆಗಳಿಗೆ ಸೋಮವಾರ ಬೆಂಗಳೂರಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಬಂದ್ಗೆ ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿದ್ದು, ಶಾಲಾ ಮಕ್ಕಳಿಗೆ ಹೋಗಲು ತೊಂದರೆಯಾಗುವುದರಿಂದ ಬೆಂಗಳೂರಿನ ಆರ್ಕಿಡ್ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿದೆ.
ಸರಕು ಸಾಗಣೆ ವಾಹನ, ಶಾಲಾ ವಾಹನ, ಟ್ಯಾಕ್ಸಿ, ಖಾಸಗಿ ಬಸ್, ಓಲಾ, ಉಬರ್, ಆಟೋ ಸೋಮವಾರ ರಸ್ತೆಗಿಳಿಯುವುದಿಲ್ಲ. ಅನೇಕ ಶಾಲೆಗಳು ರಜೆ ಘೋಷಣೆ ಮಾಡಿದ್ದು, ಹಾಗೆ ಮತ್ತಷ್ಟು ಶಾಲೆಗಳು ರಜೆ ಘೋಷಣೆ ಮಾಡಲಿದೆ ಎಂದು ಒಕ್ಕೂಟದ ಪ್ರಮುಖ ಜಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನೂ ಕರ್ನಾಟಕ ಖಾಸಗಿ ಶಾಲಾ ವಾಹನಗಳ ಯೂನಿಯನ್ ವತಿಯಿಂದ ಖಾಸಗಿ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಿದೆ.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…