ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಬಹಳ ನಷ್ಟ ಉಂಟಾಗಿದ್ದು, ಇದಕ್ಕೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಪೂರೈಸಬೇಕೆಂದು ಒತ್ತಾಯಿಸಿ, ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಷ್ಕರವನ್ನು ನಾಳೆ ಕೈಗೊಂಡಿದೆ.
ಇಂದು ರಾತ್ರಿಯಿಂದಲೇ ಈ ಸಾರಿಗೆ ಬಂದ್ ಆಗಲಿದ್ದು, ಕೆಲವು ಖಾಸಗಿ ಶಾಲೆಗಳಿಗೆ ಸೋಮವಾರ ಬೆಂಗಳೂರಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಬಂದ್ಗೆ ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿದ್ದು, ಶಾಲಾ ಮಕ್ಕಳಿಗೆ ಹೋಗಲು ತೊಂದರೆಯಾಗುವುದರಿಂದ ಬೆಂಗಳೂರಿನ ಆರ್ಕಿಡ್ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿದೆ.
ಸರಕು ಸಾಗಣೆ ವಾಹನ, ಶಾಲಾ ವಾಹನ, ಟ್ಯಾಕ್ಸಿ, ಖಾಸಗಿ ಬಸ್, ಓಲಾ, ಉಬರ್, ಆಟೋ ಸೋಮವಾರ ರಸ್ತೆಗಿಳಿಯುವುದಿಲ್ಲ. ಅನೇಕ ಶಾಲೆಗಳು ರಜೆ ಘೋಷಣೆ ಮಾಡಿದ್ದು, ಹಾಗೆ ಮತ್ತಷ್ಟು ಶಾಲೆಗಳು ರಜೆ ಘೋಷಣೆ ಮಾಡಲಿದೆ ಎಂದು ಒಕ್ಕೂಟದ ಪ್ರಮುಖ ಜಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನೂ ಕರ್ನಾಟಕ ಖಾಸಗಿ ಶಾಲಾ ವಾಹನಗಳ ಯೂನಿಯನ್ ವತಿಯಿಂದ ಖಾಸಗಿ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…