ಜನ ಮನದ ನಾಡಿ ಮಿಡಿತ

Advertisement

ನಗರದ ಪಂಪ್ವೆಲ್‌ ನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಯುವತಿ; ವಿಡಿಯೋ ವೈರಲ್..

ಯುವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟಂತಹ ಘಟನೆಯೊಂದು ನಡೆದಿದೆ.

ಪಂಪ್ವೆಲ್‌ನಲ್ಲಿ ಮೆಡಿಕಲ್‌ ಒಂದಕ್ಕೆ ಬಂದಿದ್ದ ಯುವತಿಯೋರ್ವಳು ಎಲ್ಲರ ಮೇಲೆ ಆಕ್ರಮಣಕಾರಿಯಾಗಿ ವರ್ತನೇ ಮಾಡುತ್ತಿದ್ದು, ಇದನ್ನು ಕಂಡ ರೌಂಡ್ಸ್‌ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಕೆ ಪೊಲೀಸರ ಮೇಲೆ ದಾಳಿ ಮಾಡಿದ್ದು, ಬೇರೆ ವಿಧಿಯಿಲ್ಲಿ ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದಾರೆ.


ಯುವತಿ ಅಲ್ಲಿ ಕೂಡಾ ಮಹಿಳಾ ಪೊಲೀಸರಿಗೆ ತನ್ನ ಕಾಲಿನಿಂದ ಒದ್ದಿದ್ದಾಳೆ. ನಂತರ ಯುವತಿಯ ಕೈಗೆ ಕೋಳ ತೊಡಿಸಿ ಕೈ ಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಲಾಗಿದೆ.

ಡ್ರಗ್ಸ್‌ ಏನಾದರೂ ತಗೊಂಡು ಈ ರೀತಿ ವರ್ತನೆ ಮಾಡುತ್ತಿದ್ದಾಳೆಯೇ ಎಂದು ಚೆಕ್‌ ಮಾಡಿದಾಗ, ಇದೆಲ್ಲ ನೆಗೆಟಿವ್‌ ಬಂದಿದೆ. ನಂತರ ಆಕೆಯ ಪೋಷಕರ ಬಗ್ಗೆ ಕೇಳಿದಾಗ ಏನೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇಂಗ್ಲೀಷ್‌ ಮಾತನಾಡುವ ಈಕೆಯನ್ನು ಕೊನೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಒಯ್ಯುವ ಸಂದರ್ಭದಲ್ಲಿ ನನ್ನ ಮನೆ ಇಲ್ಲಿದೆ ಎಂದಿದ್ದಾಳೆ. ಕೊನೆಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಾ ಇದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!