ಯುವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟಂತಹ ಘಟನೆಯೊಂದು ನಡೆದಿದೆ.
ಪಂಪ್ವೆಲ್ನಲ್ಲಿ ಮೆಡಿಕಲ್ ಒಂದಕ್ಕೆ ಬಂದಿದ್ದ ಯುವತಿಯೋರ್ವಳು ಎಲ್ಲರ ಮೇಲೆ ಆಕ್ರಮಣಕಾರಿಯಾಗಿ ವರ್ತನೇ ಮಾಡುತ್ತಿದ್ದು, ಇದನ್ನು ಕಂಡ ರೌಂಡ್ಸ್ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಕೆ ಪೊಲೀಸರ ಮೇಲೆ ದಾಳಿ ಮಾಡಿದ್ದು, ಬೇರೆ ವಿಧಿಯಿಲ್ಲಿ ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದಾರೆ.
ಯುವತಿ ಅಲ್ಲಿ ಕೂಡಾ ಮಹಿಳಾ ಪೊಲೀಸರಿಗೆ ತನ್ನ ಕಾಲಿನಿಂದ ಒದ್ದಿದ್ದಾಳೆ. ನಂತರ ಯುವತಿಯ ಕೈಗೆ ಕೋಳ ತೊಡಿಸಿ ಕೈ ಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಲಾಗಿದೆ.
ಡ್ರಗ್ಸ್ ಏನಾದರೂ ತಗೊಂಡು ಈ ರೀತಿ ವರ್ತನೆ ಮಾಡುತ್ತಿದ್ದಾಳೆಯೇ ಎಂದು ಚೆಕ್ ಮಾಡಿದಾಗ, ಇದೆಲ್ಲ ನೆಗೆಟಿವ್ ಬಂದಿದೆ. ನಂತರ ಆಕೆಯ ಪೋಷಕರ ಬಗ್ಗೆ ಕೇಳಿದಾಗ ಏನೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇಂಗ್ಲೀಷ್ ಮಾತನಾಡುವ ಈಕೆಯನ್ನು ಕೊನೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಒಯ್ಯುವ ಸಂದರ್ಭದಲ್ಲಿ ನನ್ನ ಮನೆ ಇಲ್ಲಿದೆ ಎಂದಿದ್ದಾಳೆ. ಕೊನೆಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಾ ಇದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…