ಯುವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟಂತಹ ಘಟನೆಯೊಂದು ನಡೆದಿದೆ.
ಪಂಪ್ವೆಲ್ನಲ್ಲಿ ಮೆಡಿಕಲ್ ಒಂದಕ್ಕೆ ಬಂದಿದ್ದ ಯುವತಿಯೋರ್ವಳು ಎಲ್ಲರ ಮೇಲೆ ಆಕ್ರಮಣಕಾರಿಯಾಗಿ ವರ್ತನೇ ಮಾಡುತ್ತಿದ್ದು, ಇದನ್ನು ಕಂಡ ರೌಂಡ್ಸ್ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಕೆ ಪೊಲೀಸರ ಮೇಲೆ ದಾಳಿ ಮಾಡಿದ್ದು, ಬೇರೆ ವಿಧಿಯಿಲ್ಲಿ ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದಾರೆ.
ಯುವತಿ ಅಲ್ಲಿ ಕೂಡಾ ಮಹಿಳಾ ಪೊಲೀಸರಿಗೆ ತನ್ನ ಕಾಲಿನಿಂದ ಒದ್ದಿದ್ದಾಳೆ. ನಂತರ ಯುವತಿಯ ಕೈಗೆ ಕೋಳ ತೊಡಿಸಿ ಕೈ ಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಲಾಗಿದೆ.
ಡ್ರಗ್ಸ್ ಏನಾದರೂ ತಗೊಂಡು ಈ ರೀತಿ ವರ್ತನೆ ಮಾಡುತ್ತಿದ್ದಾಳೆಯೇ ಎಂದು ಚೆಕ್ ಮಾಡಿದಾಗ, ಇದೆಲ್ಲ ನೆಗೆಟಿವ್ ಬಂದಿದೆ. ನಂತರ ಆಕೆಯ ಪೋಷಕರ ಬಗ್ಗೆ ಕೇಳಿದಾಗ ಏನೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇಂಗ್ಲೀಷ್ ಮಾತನಾಡುವ ಈಕೆಯನ್ನು ಕೊನೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಒಯ್ಯುವ ಸಂದರ್ಭದಲ್ಲಿ ನನ್ನ ಮನೆ ಇಲ್ಲಿದೆ ಎಂದಿದ್ದಾಳೆ. ಕೊನೆಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಾ ಇದೆ.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…