ಕರಾವಳಿ

ಪುತ್ತೂರು ಕಾಂಗ್ರೆಸ್ ಹಿರಿಯ ನಾಯಕ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ, ದೇವತಾ ಸಮಿತಿ ಯ ಅಧ್ಯಕ್ಷ ಎನ್ ಸುಧಾಕರ್ ಶೆಟ್ಟಿ ನಿಧನ

ಪುತ್ತೂರು: ಪುತ್ತೂರು ಕಾಂಗ್ರೆಸ್ ನ ಹಿರಿಯ ನಾಯಕ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು, ದೇವತಾ ಸಮಿತಿ ಯ ಅಧ್ಯಕ್ಷರು ಎನ್ ಸುಧಾಕರ್ ಶೆಟ್ಟಿಯವರು ಸೆ.10ರಂದು ರಾತ್ರಿ ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ನಿಧನರಾದರು.

ಮೃತ ದೇಹವನ್ನು ಇಂದು ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ನಿವಾಸಕ್ಕೆ ತರಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಗೀತಾ, ಪುತ್ರರಾದ ಅಭಿಷೇಕ್ ಮತ್ತು ಅಭಿಜೀತ್ ಅವರನ್ನು ಅಗಲಿದ್ದು, ಇಬ್ಬರೂ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ.

44 ವರ್ಷಗಳಿಂದ ದೇವತಾ ಸಮಿತಿ ಅಧ್ಯಕ್ಷರಾಗಿ ಸೇವೆ:
ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ
ಮಹಾಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 44 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. 1957ರಲ್ಲಿ
ದಿ. ಹನುಮಂತ ಮಲ್ಯ ಅವರು ಕಿಲೆ ಮೈದಾನದಲ್ಲಿ ಮಹಾಗಣೇಶೋತ್ಸವ ಆರಂಭಿಸಿದ್ದರು. ಅವರ ಬಳಿಕ ಕಳೆದ
44 ವರ್ಷಗಳಿಂದ ಎನ್.ಸುಧಾಕರ್ ಶೆಟ್ಟಿಯವರು ಅದರ ನೇತೃತ್ವ ವಹಿಸಿ ಮುಂದುವರಿಸಿಕೊಂಡು ಬರುತ್ತಿದ್ದಾರೆ.
ಪ್ರಸ್ತುತ ಕಿಲ್ಲೆ ಮೈದಾನದಲ್ಲಿ 66ನೇ ವರ್ಷದ ಗಣೇಶೋತ್ಸವ ನಡೆಯುತ್ತಿದ್ದು 60ನೇ ವರ್ಷದಲ್ಲಿ ಸುಧಾಕರ
ಶೆಟ್ಟಿಯವರ ನೇತೃತ್ವದಲ್ಲಿ ನಿರಂತರ 9 ದಿನಗಳ ಕಾಲ ಕಾರ್ಯಕ್ರಮ ನಡೆಸಲಾಗಿತ್ತು. ಬಳಿಕದ ದಿನಗಳಲ್ಲಿ
ನಿರಂತರ 7 ದಿನ ಕಾರ್ಯಕ್ರಮ ನಡೆಸುತ್ತಾ ಬರಲಾಗುತ್ತಿದೆ. ಕಿಲ್ಲೇ ಮೈದಾನದ ಗಣಪತಿಯು ವರ್ಣ, ಜಾತಿ, ಮತ
ಹಾಗೂ ಧರ್ಮ ಬೇಧವಿಲ್ಲದೆ ನಡೆಯುತ್ತಿರುವ ಸಾರ್ವಜನಿಕ ಮಹೋತ್ಸವ ಎಂಬುದಾಗಿ ಹೇಳಲು
ಹೆಮ್ಮೆಯಾಗುತ್ತದೆ ಎಂದು ಸುಧಾಕರ್ ಶೆಟ್ಟಿಯವರೇ ಹೇಳಿಕೊಂಡಿದ್ದರು.


ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಸೇವೆ:

ಎನ್.ಸುಧಾಕರ್ ಶೆಟ್ಟಿಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶ ಸಮಿತಿಯ
ಉಪಾಧ್ಯಕ್ಷರಾಗಿ, ಬ್ರಹ್ಮರಥ ಸಮರ್ಪಣಾ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ, ಬಳಿಕ ಶ್ರೀ ಮಹಾಲಿಂಗೇಶ್ವರ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿಯೂ ಹಲವು ವರ್ಷ ದೇವರ ಸೇವೆ ಮಾಡಿದರು. ಅವರ
ಅವಧಿಯಲ್ಲಿ ದೇವಳದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಮೊದಲ ಬಾರಿಗೆ ದೇವಸ್ಥಾನದ
ಬಾಲಗಣಪತಿಗೆ ಮೂಡಪ್ಪ ಸೇವೆ ಮಾಡಿಸಿದರು. ದೇವಳದ ಪೂರ್ವ ದ್ವಾರದ ಗೋಪುರ ರಚನ ಮಾಡಿದರು.
ಸ್ವರ್ಣಲೇಪಿತ ಧ್ವಜಸ್ತಂಭ ಮಾಡಿಸಿದರು. ದೇವರಿಗೆ ಸೇವೆ ನೀಡುವ ಭಕ್ತರ ಮನಸಂಕಲ್ಪದಂತೆ ಅರ್ಚಕರ
ಮೂಲಕ ಸಂಕಲ್ಪ ಕಾರ್ಯ ಆರಂಭಿಸಿದ್ದರು. ದೇವಳದ ಗರ್ಭಗುಡಿಯಲ್ಲಿ ಕಾರ್ತಿಕ ಪೂಜೆ ಸಂದರ್ಭ ನಿಂತು
ಹೋಗಿದ್ದ `ದಳಿ’ಯನ್ನು ಮತ್ತೆ ಹೊಸ ದಳಿಯನ್ನು ಆರಂಭಿಸುವ ಮೂಲಕ ದೇವರಿಗೆ ನಿತ್ಯ ಬೆಳಕಿನ ಸೇವೆ
ನೀಡಿದರು. ಇವೆಲ್ಲದರ ನಡುವೆ ದೇವರ ಮೇಲೆ ಅಪಾರ ಭಕ್ತಿಯಿಟ್ಟಿದ್ದ ಅವರು ಪ್ರತಿ ದಿನ ಬೆಳಿಗ್ಗೆ ದೇವಳಕ್ಕೆ
ಬರುತ್ತಿದ್ದರು. ಧನುರ್ಮಾಸ ಪೂಜೆ ಸಂದರ್ಭವೂ ಬೆಳಗ್ಗೆ, ದೇವಸ್ಥಾನಕ್ಕೆ ಆಗಮಿಸುತ್ತಿದ್ದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ 10 ವರ್ಷ:
10 ವರ್ಷ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2 ಬಾರಿ ಪುತ್ತೂರು
ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ವಿದ್ಯಾರ್ಥಿಯಾಗಿದ್ದಾಲೇ
ರಾಜಕೀಯದೆಡೆಗೆ ಆಸಕ್ತಿ ಬೆಳೆಸಿಕೊಂಡಿದ್ದ ಅವರು ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಥಮ ವಿದ್ಯಾರ್ಥಿ
ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕ್ರಿಕೆಟ್ ಆಟಗಾರರಾಗಿದ್ದ ಅವರು
ಎನ್.ಎಸ್.ಯು.ಐ ಘಟಕದ ಅಧ್ಯಕ್ಷರಾಗಿ, ಬಳಿಕ ರಾಜಕೀಯ ಪ್ರವೇಶ ಮಾಡಿ ಯುವ ಕಾಂಗ್ರೆಸ್
ಅಧ್ಯಕ್ಷರಾಗಿದ್ದರು. ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಸಂಚಾಲಕರಾಗಿದ್ದರು. ಸಾಮಾಜಿಕ,
ಧಾರ್ಮಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

22 hours ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

22 hours ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago