ಬಂಟ್ವಾಳ: ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಕಲ್ಲಡ್ಕ ಎಂಬಲ್ಲಿ ನಿನ್ನೆ ಮಧ್ಯಾಹ್ನ ವೇಳೆ ನಡೆದಿದೆ. ಮಹಾಲಿಂಗ್ ಭಟ್ ಎಂಬವರ ಖಾಸಗಿ ಕಾರಿಗೆ ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿದ ಘನಗಾತ್ರದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಬಹುಭಾಗ ಜಖಂಗೊಂಡಿದೆಯಲ್ಲದೆ ಎರಡು ಟಯರ್ ಗಳು ಒಡೆದುಹೋಗಿದೆ. ಅದೃಷ್ಟವಶಾತ್ ಕಾರಿನ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಲಾರಿ ಗುದ್ದಿದೆ.
ಕಲ್ಲಡ್ಕ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು ಅಮೆ ನಡಿಗೆಯಲ್ಲಿ ಪ್ರಯಾಣ ಮಾಡಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿಯೂ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದರೆ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದೆ.
ಕಂಪೆನಿಗೆ ಸೇರಿದ ವಾಹನಗಳು ಇದೇ ರೀತಿ ಅನೇಕ ಬಾರಿ ಅಪಘಾತಕ್ಕೆ ಕಾರಣವಾಗಿದೆ. ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯನ್ನು ಮಾಡುತ್ತಿರುವ ಬಗ್ಗೆ ಮತ್ತು ಅದರಿಂದಾಗುವ ಪರಿಣಾಮಗಳ ಬಗ್ಗೆ ಇತ್ತೀಚಿಗೆ ಸಂಸದರ ಬಳಿ ಸಾರ್ವಜನಿಕರು ದೂರಿದ್ದರು. ಕಂಪೆನಿ ಮಾತ್ರ ಯಾರ ಮಾತಿಗೂ ಬೆಲೆ ಕೊಡದೆ ಮೌನವಾಗಿ ಉಳಿದುಬಿಟ್ಟಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…