ಬಂಟ್ವಾಳ: ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಕಲ್ಲಡ್ಕ ಎಂಬಲ್ಲಿ ನಿನ್ನೆ ಮಧ್ಯಾಹ್ನ ವೇಳೆ ನಡೆದಿದೆ. ಮಹಾಲಿಂಗ್ ಭಟ್ ಎಂಬವರ ಖಾಸಗಿ ಕಾರಿಗೆ ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿದ ಘನಗಾತ್ರದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಬಹುಭಾಗ ಜಖಂಗೊಂಡಿದೆಯಲ್ಲದೆ ಎರಡು ಟಯರ್ ಗಳು ಒಡೆದುಹೋಗಿದೆ. ಅದೃಷ್ಟವಶಾತ್ ಕಾರಿನ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಲಾರಿ ಗುದ್ದಿದೆ.
ಕಲ್ಲಡ್ಕ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು ಅಮೆ ನಡಿಗೆಯಲ್ಲಿ ಪ್ರಯಾಣ ಮಾಡಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿಯೂ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದರೆ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದೆ.
ಕಂಪೆನಿಗೆ ಸೇರಿದ ವಾಹನಗಳು ಇದೇ ರೀತಿ ಅನೇಕ ಬಾರಿ ಅಪಘಾತಕ್ಕೆ ಕಾರಣವಾಗಿದೆ. ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯನ್ನು ಮಾಡುತ್ತಿರುವ ಬಗ್ಗೆ ಮತ್ತು ಅದರಿಂದಾಗುವ ಪರಿಣಾಮಗಳ ಬಗ್ಗೆ ಇತ್ತೀಚಿಗೆ ಸಂಸದರ ಬಳಿ ಸಾರ್ವಜನಿಕರು ದೂರಿದ್ದರು. ಕಂಪೆನಿ ಮಾತ್ರ ಯಾರ ಮಾತಿಗೂ ಬೆಲೆ ಕೊಡದೆ ಮೌನವಾಗಿ ಉಳಿದುಬಿಟ್ಟಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…