ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ.
ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತಿಳಿಸಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…