ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ.
ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತಿಳಿಸಿದೆ.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…