ಬಂಟ್ವಾಳ ತಾಲೂಕಿನ ಪುಣಚದ ದೇವರಗುಂಡಿ ಮಣಿಲಾ ಕೂರೇಲು ಸ್ಮಶಾನ ರಸ್ತೆ ಮತ್ತೆ ಕುಸಿದು ಬಿದ್ದು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಖಾಸಗಿ ಜಮೀನಿನವರ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಬದಿ ಕುಸಿಯುತ್ತಿದ್ದು ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಕಷ್ಟು ಬಾರಿ ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಗೆ ತೆರಳುವ ಮಕ್ಕಳು, ಮಹಿಳೆಯರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಇದೆ.
ಕೆಲ ವರ್ಷಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಕಮೀಶನ್ ರವರು ಮಣ್ಣು ತೆಗೆದ ಜಾಗಕ್ಕೆ ಮಣ್ಣು ಹಾಕಿ ಕಲ್ಲುಕಟ್ಟಿ ಕೊಡುವಂತೆ ಸೂಚಿಸಿದ್ದರು. ಅದರಂತೆ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡಿದ್ದರು. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಇರುವುದರಿಂದ ರಸ್ತೆಯ ಬದಿ ಮತ್ತೆ ಮತ್ತೆ ಜರಿದು ಬಿದ್ದು ಅನಾಹುತಗಳಿಗೆ ಅವಕಾಶವಾಗುತ್ತಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…