ಬಂಟ್ವಾಳ ತಾಲೂಕಿನ ಪುಣಚದ ದೇವರಗುಂಡಿ ಮಣಿಲಾ ಕೂರೇಲು ಸ್ಮಶಾನ ರಸ್ತೆ ಮತ್ತೆ ಕುಸಿದು ಬಿದ್ದು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಖಾಸಗಿ ಜಮೀನಿನವರ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಬದಿ ಕುಸಿಯುತ್ತಿದ್ದು ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಕಷ್ಟು ಬಾರಿ ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಗೆ ತೆರಳುವ ಮಕ್ಕಳು, ಮಹಿಳೆಯರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಇದೆ.
ಕೆಲ ವರ್ಷಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಕಮೀಶನ್ ರವರು ಮಣ್ಣು ತೆಗೆದ ಜಾಗಕ್ಕೆ ಮಣ್ಣು ಹಾಕಿ ಕಲ್ಲುಕಟ್ಟಿ ಕೊಡುವಂತೆ ಸೂಚಿಸಿದ್ದರು. ಅದರಂತೆ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡಿದ್ದರು. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಇರುವುದರಿಂದ ರಸ್ತೆಯ ಬದಿ ಮತ್ತೆ ಮತ್ತೆ ಜರಿದು ಬಿದ್ದು ಅನಾಹುತಗಳಿಗೆ ಅವಕಾಶವಾಗುತ್ತಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್ನಲ್ಲಿರುವ…