ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ವಾಲ್ಪಾಡಿ ಮಾಡದಂಗಡಿ ಶಾಲಾ ಶಿಕ್ಷಕಿ ವಾಣಿಶ್ರೀ ಅವರನ್ನು ಎಸ್, ಡಿ, ಎಂ, ಸಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮೋತ್ಸವ ಸಮಿತಿ ಹಾಗೂ ಫ್ರೆಂಡ್ಸ್ ವಾಲ್ಪಾಡಿ ವತಿಯಿಂದ ಎಲ್ಲ ಸಂಘಟನೆಗಳ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಅವರು ವಾಣಿಶ್ರೀ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ವಾಲ್ಪಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರ, ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಉದ್ಯಮಿಗಳಾದ ವಿಘ್ನೇಶ್ ಆಚಾರ್ಯ, ಸಂತೋಷ್ ಅಮಣಿ ಅತಿಥಿಗಳಾಗಿ ಭಾಗವಹಿಸಿದ್ದರು.
ಎಸ್, ಡಿ,ಎಂ,ಸಿ ಮಾಜಿ ಅಧ್ಯಕ್ಷರಾದ ಸುಧಾಕರ ಸುವರ್ಣ, ಪ್ರಭಾವತಿ, ಇಬ್ರಾಹಿಂ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಆನಂದ ,ಮಹಿಳಾ ಮಂಡಲ ಅಧ್ಯಕ್ಷೆ ಜೆಸಿಂತಾ ಫೆರ್ನಾಂಡೀಸ್, ಅಂಗನವಾಡಿ ಶಿಕ್ಷಕಿ ಸುನೀತಾ ವೇದಿಕೆಯಲ್ಲಿದ್ದರು.
ಸಹಶಿಕ್ಷಕಿ ರಶ್ಮಿ ಎಂ.ಎಸ್. ಸ್ವಾಗತಿಸಿ ವಾಣಿಶ್ರೀ ಅವರನ್ನು ಪರಿಚಯಿಸಿದರು. ಬಿಂದು ಕುಮಾರಿ ವಂದಿಸಿದರು.
ಎಸ್, ಡಿ,ಎಂ,ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ನಿರೂಪಿಸಿದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…