ಮಂಗಳೂರಿನ ಹೆಸರಾಂತ ಹೋಟೆಲ್ನ ಈಜುಕೊಳದ ವ್ಯಾಪ್ತಿಯಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಕೇರಳ ರಾಜ್ಯದ ತಿರುವನಂತಪುರಂ ಮೂಲದ ಶ್ರೀ ಗೋಪು ಆರ್ ನಾಯರ್ ಎಂದು ಅಧಿಕೃತವಾಗಿ ಗುರುತಿಸಲಾಗಿದೆ.
ಅವರ ಮೃತ ದೇಹವು ಹೋಟೆಲ್ನ ಈಜುಕೊಳದಲ್ಲಿ ಪತ್ತೆಯಾಗಿದೆ. ಗೋಪು ಆರ್. ನಾಯರ್ ನಿನ್ನೆ ಮಂಗಳೂರಿಗೆ ಬಂದು ಮೋತಿ ಮಹಲ್ ಹೋಟೆಲ್ ನಲ್ಲಿ ತಂಗಿದ್ದರು. ನಿನ್ನೆ ಸಂಜೆ 4 ಗಂಟೆಗೆ ಬ್ಯಾಂಕ್ ಅಧಿಕಾರಿ ಹೋಟೆಲ್ ಕೊಠಡಿಯಿಂದ ಹೊರಟಿದ್ದಾರೆ.
ಇಂದು ಮುಳುಗು ತಜ್ಞರು ಮೃತದೇಹವನ್ನು ಈಜುಕೊಳದಿಂದ ಹೊರತೆಗೆದಿದ್ದಾರೆ. ಗೋಪು ಆರ್. ನಾಯರ್ ಅವರ ಮೃತ ದೇಹ 11 ಅಡಿ ಆಳದಲ್ಲಿತ್ತು. ಈಜುವಾಗ ಮೇಲಕ್ಕೆ ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಹೋಟೆಲ್ ಕೊಠಡಿಯಲ್ಲಿ ಮದ್ಯ ಸೇವಿಸಿ ಈಜಲು ಹೋಗಿರುವ ಶಂಕೆ ವ್ಯಕ್ತವಾಗಿದೆ. ಅವರ ಕೋಣೆಯಲ್ಲಿ ಖಾಲಿ ಮದ್ಯದ ಬಾಟಲಿ ಮತ್ತು ಆಹಾರವಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…