ಮಂಗಳೂರಿನ ಹೆಸರಾಂತ ಹೋಟೆಲ್ನ ಈಜುಕೊಳದ ವ್ಯಾಪ್ತಿಯಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಕೇರಳ ರಾಜ್ಯದ ತಿರುವನಂತಪುರಂ ಮೂಲದ ಶ್ರೀ ಗೋಪು ಆರ್ ನಾಯರ್ ಎಂದು ಅಧಿಕೃತವಾಗಿ ಗುರುತಿಸಲಾಗಿದೆ.
ಅವರ ಮೃತ ದೇಹವು ಹೋಟೆಲ್ನ ಈಜುಕೊಳದಲ್ಲಿ ಪತ್ತೆಯಾಗಿದೆ. ಗೋಪು ಆರ್. ನಾಯರ್ ನಿನ್ನೆ ಮಂಗಳೂರಿಗೆ ಬಂದು ಮೋತಿ ಮಹಲ್ ಹೋಟೆಲ್ ನಲ್ಲಿ ತಂಗಿದ್ದರು. ನಿನ್ನೆ ಸಂಜೆ 4 ಗಂಟೆಗೆ ಬ್ಯಾಂಕ್ ಅಧಿಕಾರಿ ಹೋಟೆಲ್ ಕೊಠಡಿಯಿಂದ ಹೊರಟಿದ್ದಾರೆ.
ಇಂದು ಮುಳುಗು ತಜ್ಞರು ಮೃತದೇಹವನ್ನು ಈಜುಕೊಳದಿಂದ ಹೊರತೆಗೆದಿದ್ದಾರೆ. ಗೋಪು ಆರ್. ನಾಯರ್ ಅವರ ಮೃತ ದೇಹ 11 ಅಡಿ ಆಳದಲ್ಲಿತ್ತು. ಈಜುವಾಗ ಮೇಲಕ್ಕೆ ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಹೋಟೆಲ್ ಕೊಠಡಿಯಲ್ಲಿ ಮದ್ಯ ಸೇವಿಸಿ ಈಜಲು ಹೋಗಿರುವ ಶಂಕೆ ವ್ಯಕ್ತವಾಗಿದೆ. ಅವರ ಕೋಣೆಯಲ್ಲಿ ಖಾಲಿ ಮದ್ಯದ ಬಾಟಲಿ ಮತ್ತು ಆಹಾರವಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…