ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು, ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಬಡಗ ಎಕ್ಕಾರು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ, ಸರಕಾರಿ ಪದವಿ ಪೂರ್ವ ಕಾಲೇಜು, ಪಡುಪಣಂಬೂರು ನ ನಿವೃತ್ತ ಆಂಗ್ಲ ಉಪನ್ಯಾಸಕರಾದ ಪ್ರೇಮನಾಥ ಶೆಟ್ಟಿಗಾರ್ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಪಣಂಬೂರು ಇಲ್ಲಿನ ನಿವೃತ್ತ ಮುಖ್ಯ ಶಿಕ್ಷಕಿ ರತಿ ವೈ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸರಕಾರಿ ಶಾಲೆ, ಟೀಚರ್ಸ್ ಎಜುಕೇಶನ್ ಮಂಗಳೂರು ಇಲ್ಲಿನ ಪ್ರಾಧ್ಯಾಪಕರಾದ ಓ. ಆರ್. ಪ್ರಕಾಶ್ ಇವರು , ಶಿಕ್ಷಕರ ತ್ಯಾಗ ಶ್ರಮವನ್ನು ಗುರುತಿಸಿ ಶಿಕ್ಷಕರ ದಿನಾಚರಣೆಯಂದು ಸನ್ಮಾನ ಮಾಡುತ್ತಿರುವುದು ಸಂಘ-ಸಂಸ್ಥೆಗಳ ಶ್ಲಾಘನೀಯ ಕಾರ್ಯ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಮತಿ ಯಶೋಧ ಪಿ ರಾವ್, ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಹೇಮನಾಥ ಅಮೀನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್ ಸ್ವಾಗತಿಸಿ, ಯುವಕ ಸಂಘದ ಅಧ್ಯಕ್ಷರಾದ ಶೇಖರ ಶೆಟ್ಟಿಗಾರ್ ವಂದಿಸಿದರು. ವಿನೋದ ಭಟ್ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…