ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರದ 6 ಅಂಗನವಾಡಿ ಕೇಂದ್ರಗಳಾದ ಪುಚ್ಚೇರಿಕಟ್ಟೆ, ಕೋಟೆಬಾಗಿಲು, ಅಲಂಗಾರು, ಮೂಡುಬಿದಿರೆ ಪೇಟೆ, ಮರಿಯಾಡಿ, ಜೈನ್ ಪೇಟೆ, ಸಹಯೋಗದಲ್ಲಿ ಪೋಷಣ್ ಅಭಿಯಾನ ಯೋಜನೆಯ ಅಡಿಯಲ್ಲಿ ಪುಚ್ಚೇರಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ನಡೆಯಿತು.
ಪುರಸಭೆ ಸದಸ್ಯ ಪುರಂದರ ದೇವಾಡಿಗ ಅವರು ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿ ಸರಕಾರದಿಂದ ಸಿಗುವಂತಹ ಗರ್ಭಿಣಿ, ಬಾಣಂತಿ, ಮಕ್ಕಳ ಆಹಾರದ ಪ್ರಯೋಜವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಮುದಾಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ ಅವರು ಆರೋಗ್ಯಕ್ಕೆ ಪೌಷ್ಠಿಕ ಆಹಾರದ ಪ್ರಮುಖ್ಯತೆ ಸಿರಿಧ್ಯಾನ್ಯಗಳ ಕುರಿತು ಮಾಹಿತಿಯನ್ನು ನೀಡಿದರು.
ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾಂತಮ್ಮ ಅವರುಗರ್ಭಿಣಿ, ಮಕ್ಕಳ ಚುಚ್ಚುಮದ್ದಿನ ಕುರಿತು ಮಾಹಿತಿಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿರ್ತಾಡಿ ವಲಯದ ಮೇಲ್ವಿ ಚಾರಕಿ ಶುಭ, ಪುರಸಭಾ ಸದಸ್ಯರುಗಳಾದ ಪುರಂದರ ದೇವಾಡಿಗ, ಮಮತಾ ಅನಂದ್, ಶ್ವೇತಾ ಪ್ರವೀಣ್ ಜೈನ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸರಿತಾ, ಸುಷ್ಮಾ, ರಶೀದಾ ಅಂಗನವಾಡಿ ಕಾರ್ಯಕರ್ತೆ ವಿಜಯ, ಪ್ರಿಯದರ್ಶಿನಿ ಎಸ್ ಜೈನ್, ಸುಮತಿ ಸಹಾಯಕಿ ರಾಜಶ್ರೀ ಭಾಗವಹಿಸಿದ್ದರು. ಹಾಗೆಯೇ ಬಾಲವಿಕಾಸ ಸಮಿತಿಯ ಸದಸ್ಯರು, ಸ್ತ್ರೀಶಕ್ತಿ ಸದಸ್ಯರು, ಮಕ್ಕಳ ತಾಯಂದಿರು ಪುಟಾಣಿಗಳು ಭಾಗವಹಿಸಿದ್ದರು.
ಪೌಷ್ಟಿಕ ಆಹಾರದ ಪ್ರಾತ್ಯಕ್ಷತೆಯನ್ನು 6 ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಸದಸ್ಯರು, ಮಕ್ಕಳ ತಾಯಂದಿರು ಸ್ತ್ರೀಶಕ್ತಿ ಸದಸ್ಯರು ಸ್ಥಳೀಯವಾಗಿ ಲಭ್ಯವಿರುವ ಪೌಷ್ಟಿಕಾಂಶ ಭರಿತವಾದ ಆಹಾರವನ್ನು ಪ್ರದರ್ಶನಕ್ಕಿಟ್ಟಿದ್ದರು. ಭಾಗವಹಿಸಿದ ಎಲ್ಲರಿಗೂ ಬಹುಮಾನ ನೀಡಿ ಅಭಿನಂದಿಸಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…