ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರದ 6 ಅಂಗನವಾಡಿ ಕೇಂದ್ರಗಳಾದ ಪುಚ್ಚೇರಿಕಟ್ಟೆ, ಕೋಟೆಬಾಗಿಲು, ಅಲಂಗಾರು, ಮೂಡುಬಿದಿರೆ ಪೇಟೆ, ಮರಿಯಾಡಿ, ಜೈನ್ ಪೇಟೆ, ಸಹಯೋಗದಲ್ಲಿ ಪೋಷಣ್ ಅಭಿಯಾನ ಯೋಜನೆಯ ಅಡಿಯಲ್ಲಿ ಪುಚ್ಚೇರಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ನಡೆಯಿತು.
ಪುರಸಭೆ ಸದಸ್ಯ ಪುರಂದರ ದೇವಾಡಿಗ ಅವರು ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿ ಸರಕಾರದಿಂದ ಸಿಗುವಂತಹ ಗರ್ಭಿಣಿ, ಬಾಣಂತಿ, ಮಕ್ಕಳ ಆಹಾರದ ಪ್ರಯೋಜವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಮುದಾಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ ಅವರು ಆರೋಗ್ಯಕ್ಕೆ ಪೌಷ್ಠಿಕ ಆಹಾರದ ಪ್ರಮುಖ್ಯತೆ ಸಿರಿಧ್ಯಾನ್ಯಗಳ ಕುರಿತು ಮಾಹಿತಿಯನ್ನು ನೀಡಿದರು.
ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾಂತಮ್ಮ ಅವರುಗರ್ಭಿಣಿ, ಮಕ್ಕಳ ಚುಚ್ಚುಮದ್ದಿನ ಕುರಿತು ಮಾಹಿತಿಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿರ್ತಾಡಿ ವಲಯದ ಮೇಲ್ವಿ ಚಾರಕಿ ಶುಭ, ಪುರಸಭಾ ಸದಸ್ಯರುಗಳಾದ ಪುರಂದರ ದೇವಾಡಿಗ, ಮಮತಾ ಅನಂದ್, ಶ್ವೇತಾ ಪ್ರವೀಣ್ ಜೈನ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸರಿತಾ, ಸುಷ್ಮಾ, ರಶೀದಾ ಅಂಗನವಾಡಿ ಕಾರ್ಯಕರ್ತೆ ವಿಜಯ, ಪ್ರಿಯದರ್ಶಿನಿ ಎಸ್ ಜೈನ್, ಸುಮತಿ ಸಹಾಯಕಿ ರಾಜಶ್ರೀ ಭಾಗವಹಿಸಿದ್ದರು. ಹಾಗೆಯೇ ಬಾಲವಿಕಾಸ ಸಮಿತಿಯ ಸದಸ್ಯರು, ಸ್ತ್ರೀಶಕ್ತಿ ಸದಸ್ಯರು, ಮಕ್ಕಳ ತಾಯಂದಿರು ಪುಟಾಣಿಗಳು ಭಾಗವಹಿಸಿದ್ದರು.
ಪೌಷ್ಟಿಕ ಆಹಾರದ ಪ್ರಾತ್ಯಕ್ಷತೆಯನ್ನು 6 ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಸದಸ್ಯರು, ಮಕ್ಕಳ ತಾಯಂದಿರು ಸ್ತ್ರೀಶಕ್ತಿ ಸದಸ್ಯರು ಸ್ಥಳೀಯವಾಗಿ ಲಭ್ಯವಿರುವ ಪೌಷ್ಟಿಕಾಂಶ ಭರಿತವಾದ ಆಹಾರವನ್ನು ಪ್ರದರ್ಶನಕ್ಕಿಟ್ಟಿದ್ದರು. ಭಾಗವಹಿಸಿದ ಎಲ್ಲರಿಗೂ ಬಹುಮಾನ ನೀಡಿ ಅಭಿನಂದಿಸಲಾಯಿತು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…