ಜನ ಮನದ ನಾಡಿ ಮಿಡಿತ

Advertisement

ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ನಿರ್ಲಕ್ಷ್ಯ; ಬಸ್ಸಿನಿಂದ ಬಿದ್ದು ಮಹಿಳೆ ಸಾವು

ಮೂಡಬಿದಿರೆ: ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ನಿರ್ಲಕ್ಷ್ಯದಿಂದಾಗಿ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಬಸ್ಸಿನಿಂದ ಬಿದ್ದು ತೀವೃ ತರಹದ ಗಾಯದಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೂರಿನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮಾರೂರು ಕುಂಟೋಡಿ ನಿವಾಸಿ ನೀಲಮ್ಮ (66ವ ) ದುರ್ಘಟನೆಯಲ್ಲಿ ಸಾವನ್ನಪ್ಪಿದವರು.


ನೀಲಮ್ಮ ಅವರು ಬಿಪಿ, ಶುಗರ್ ಚೆಕ್ ಮಾಡಲೆಂದು ತನ್ನ ಮೊಮ್ಮಗನ ಜತೆ ಮೂಡುಬಿದಿರೆ ಆಸ್ಪತ್ರೆಗೆಂದು ಸಾಯಿ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ಸಿಗೆ ಹತ್ತಿದರು. ಈ ಸಂದರ್ಭ ಬಸ್ಸಿನ ನಿರ್ವಾಹಕ ರೈಟ್ ಕೊಟ್ಟಿದ್ದರಿಂದ ಚಾಲಕ ಬಸ್ ಚಲಾಯಿಸಿದಾಗ ನೀಲಮ್ಮ ಅವರು ಆಯತಪ್ಪಿ ಬಸ್ಸಿನ ಕೆಳಗೆ ಬಿದ್ದಿದ್ದಾರೆ.


ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೂಡಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಬಸ್ಸಿನ ನಿರ್ವಾಹಕ ಅಶೋಕ್ ಮತ್ತು ಚಾಲಕ ಪ್ರಸನ್ನ ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಜಾಮೀನಿನ ಮೇಲೆ ಇಬ್ಬರನ್ನೂ ಬಿಡುಗಡೆಗೊಳಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!