ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂಬ ಯೋಗ ಗುರುಗಳಾದ ಬಾಬಾ ರಾಮ್ ದೇವ್ ಅವರ ಭಾಷಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗಾಗಿ ಗುರುಗಳು ಅಕ್ಟೋಬರ್ 5ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.
ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆದಾಗಲೆಲ್ಲ ಬಾಬಾ ರಾಮ್ ದೇವ್ ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದ್ದು, ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ.
ಇನ್ನೂ ಮುಂದಿನ ವಿಚಾರಣೆ ನಡೆಯುವ ಅಕ್ಟೋಬರ್ 16ರಂದು ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ಸರ್ಕಾರಿ ಅಭಿಯೋಜಕರಿಗೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.
ಇನ್ನೂ ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ಭಾಷಣ ಮಾಡಿರುವ. ರಾಮ್ ದೇವ್ ರವರ ಅವರ ವಿರುದ್ದ ಬರ್ನೇರ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…