ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.
ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…