ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.
ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…