ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದಆರೋಪಿ ಸೆರೆ

ಮಂಗಳೂರಿನಲ್ಲಿ ಮಾದಕ ದ್ರವ್ಯ ಸಂಬಂಧಿ ಸಮಸ್ಯೆಗಳ ವಿರುದ್ಧ ನಡೆಯುತ್ತಿರುವ ಅಭಿಯಾನದಲ್ಲಿ ಸಿಸಿಬಿ ಪೊಲೀಸರು ನಗರದ ನಿವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿಷೇಧಿತ ಎಂಡಿಎಂಎ ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬರು ಉಳ್ಳಾಲ ಒಂಬತ್ತುಕೆರೆ ಪರಿಸರದಲ್ಲಿ ಎಂಡಿಎಂಎ ಮಾದಕ ದ್ರವ್ಯಗಳನ್ನು ಹೊಂದಿ ಹಂಚುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಯಶಸ್ವಿ ದಾಳಿ ನಡೆಸಿ ಚವ್ವಾ (30) ಎಂಬ ಅಬ್ದುಲ್ ಸವಾಝ್ ಎಂಬಾತನನ್ನು ಬಂಧಿಸಿದ್ದಾರೆ. ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ, ಪ್ರಸ್ತುತ ಉಳ್ಳಾಲದ ಜಂಕ್ಷನ್ ಬಳಿಯ ಮಾಸ್ತಿಕಟ್ಟೆಯಲ್ಲಿ ವಾಸವಾಗಿರುವ ಸವಾಝ್ ನನ್ನು ಬಂಧಿಸಲಾಗಿದೆ.


ಕಾರ್ಯಾಚರಣೆ ವೇಳೆ ಆರೋಪಿಯಿಂದ 25 ಗ್ರಾಂ ಎಂಡಿಎಂಎ ಡ್ರಗ್ಸ್ 1,25,000 ರೂ., ಹೊಂಡಾ ಆಕ್ಟಿವಾ ಸ್ಕೂಟರ್, ಮೊಬೈಲ್ ಫೋನ್, 2,120 ರೂ ನಗದು, ಡಿಜಿಟಲ್ ತೂಕದ ಮಾಪಕವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 2,17,000 ರೂ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ದ್ರವ್ಯ ದಂಧೆ ಜಾಲದಲ್ಲಿ ಹಲವರು ಭಾಗಿಯಾಗಿರುವ ಬಗ್ಗೆ ತನಿಖೆ ಮುಂದುವರಿದಿದೆ.

ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!