ಬೆಳ್ತಂಗಡಿ : ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು.
ಈ ಕುರಿತು ತೀರ್ಪು ನೀಡಿದ ಹೈಕೋರ್ಟ್ ಸರಕಾರ ಅಥವಾ ಮೂಲ ದೂರುದಾರರು ಅಥವಾ ಸಂತ್ರಸ್ಥ ಕುಟುಂಬ ಮಾತ್ರ ಆರೋಪಿಯನ್ನ ದೋಷಮುಕ್ತಗೊಳಿಸಿದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿಲ್ಲಿ ಅವಕಾಶವಿದೆ. ತನಿಖಾಲೋಪದ ಅಂಶವನ್ನ ಮೇಲ್ಮನವಿಯಲ್ಲೇ ಪರಿಗಣಿಸಲು ಕಾನೂನಿಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಭೆ,ಸಮಾರಂಭ ,ಧರಣಿ ಹಾಗು ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ .ಆರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ ಕಾನೂನಿನ ಮಿತಿ ಒಳಗಡೆ ವ್ಯವಹರಿಸಬೇಕಾಗುತ್ತದೆ . ಸಂತ್ರಸ್ಥ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡಿ ಎಂದು ಸಲಹೆ ನೀಡಿದ ವಿಭಾಗೀಯ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿಗೊಳಿಸಿತ್ತು.
ಸೌಜನ್ಯ ಪ್ರಕರಣದ ಮರು ತನಿಖೆಗೆ ಅಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ನವೀನ್ ಕುಮಾರ್ ನೆರಿಯ ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಮುಖರು ಸೌಜನ್ಯ ಮನೆಗೆ ಭೇಟಿ ನೀಡಿ ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಂದರ್ಭ ಕೊರ್ಟ್ ನಿರ್ದೇಶಿಸಿದಂತೆ ಮರು ತನಿಖೆಗೆ ಸೌಜನ್ಯ ಕುಟುಂಬದವರೇ ಅರ್ಜಿ ಸಲ್ಲಿಸಬೇಕಾಗಿದ್ದು ಈ ವಿಚಾರವನ್ನು ತಿಳಿಸಿ ನ್ಯಾಯಾಂಗ ಹೋರಾಟ ಮತ್ತು ಸೌಜನ್ಯಳಿಗೆ ನ್ಯಾಯಕ್ಕಾಗಿ ತಮ್ಮ ಜೋತೆ ಇದ್ದೇವೆ ಎಂಬ ಭರವಸೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕ,ಬಜರಂಗದಳ ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ.ನ್ಯಾಯವಾದಿ ಅನಿಲ್ ದಡ್ಡು,ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ,ರಮೇಶ್,ಮೋಹನ್ ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…