ಕ್ರೈಮ್

ಕಬಾಬ್‌ ಮಾರುವವನಿಗೆ RSS ಪ್ರಚಾರಕನ ವೇಷ ತೊಡಿಸಿದ ಖತರ್ನಾಕ್‌ ಲೇಡಿ..! ಹಿಂದೂ ಕಾರ್ಯಕರ್ತೆಯ ಮುಖವಾಡ ಬಟಾಬಯಲು..!!

ಹಿಂದೂ ಭಾಷಣಗಾರ್ತಿ, ಫಯರ್‌ ಬ್ರ್ಯಾಂಡ್‌ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಬೈಂದೂರು ಕ್ಷೇತ್ರದ ಬಿಜೆಪಿಗೆ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಆಕೆಯನ್ನು ವಶಕ್ಕೆ ಪಡೆಯಲಾಗಿದೆ. ಗೋವಿಂದ ಬಾಬು ಪೂಜಾರಿ ಎಂಬವರಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ್ದು, ಇವರು ನೀಡಿದ ದೂರಿನ ಅನ್ವಯ ಉಡುಪಿಯಲ್ಲಿ ಚೈತ್ರಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಗೋವಿಂದ ಬಾಬು ಪೂಜಾರಿಗೆ ಚೈತ್ರಾ ಕುಂದಾಪುರ ಸಿನಿಮಾ ಸ್ಟೈಲ್ ನಲ್ಲಿ ವಂಚಿಸಿದ ಆರೋಪ ಕೇಳಿಬಂದಿದ್ದು, ಸಾಮಾನ್ಯರನ್ನು ಕರೆದುಕೊಂಡು ಬಂದು RSS ಪ್ರಚಾರಕರ ರೀತಿ ಡ್ರಾಮಾ ಮಾಡಿಸಿದ್ದಾಳೆ. ಸಲೂನ್​ನಲ್ಲಿ ಮೇಕಪ್ ಮಾಡಿಸಿ ಆರ್​​​ಎಸ್ಎಸ್ ಪ್ರಚಾರಕರನೆಂದು ಹೇಳಿದ್ದು, ಇದಕ್ಕಾಗಿ RSS ಪ್ರಚಾರಕರ ರೀತಿ ನಟಿಸಲು ತರಬೇತಿ ನೀಡಿ, ನಟನೆ ಮಾಡಿದ ಆಸಾಮಿಗೆ ಲಕ್ಷ ಲಕ್ಷ ಸಂಭಾವನೆ ನೀಡಿದ್ದಾರೆ ಎಂಬ ಆರೋಪ ಈ ಚೈತ್ರಾ ಮೇಲಿದೆ.


ಇದಲ್ಲದೆ, ಗೋವಿಂದ ಬಾಬು ಪೂಜಾರಿಗೆ ನಾನು ಹಿಂದು ಸಂಘಟನೆಯಲ್ಲಿ ಇದ್ದೇನೆ ಎಂದು ಪರಿಚಯಿಸಿಕೊಂಡಿದ್ದ ಚೈತ್ರಾ ಕುಂದಾಪುರ, ನನಗೆ ಬಿಜೆಪಿ ಆರ್ ಎಸ್ ಎಸ್ ವರಿಷ್ಠರು ಹತ್ತಿರ ಇದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲೂ ನನ್ನ ಪ್ರಭಾವ ಇದೆ. ಸುಪ್ರೀಂ ಕೋರ್ಟ್ ಜಡ್ಜ್ ಗಳು ನನಗೆ ಪರಿಚಯ ಇದ್ದಾರೆ. ಅವರೆಲ್ಲರ ಪ್ರಭಾವ ಬಳಸಿ ಟಿಕೆಟ್ ಕೊಡಿಸ್ತೇನೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ ಎಂದು ವಂಚನೆಗೊಳಗಾದ ವ್ಯಕ್ತಿ ದೂರಿದ್ದಾರೆ. ಚಿಕ್ಕಮಗಳೂರು ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರು ಮೂಲಕ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದ ಚೈತ್ರಾ ಕುಂದಾಪುರ, ಟಿಕೆಟ್ ಕೊಡಿಸೋದಾಗಿ ನಂಬಿಸಿದ್ದಾಳೆ. ಉಡುಪಿ ಸರ್ಕಾರಿ ಅತಿಥಿ ಗೃಹದಲ್ಲಿ ಮೀಟಿಂಗ್ ಮಾಡಿ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದಾಳೆ. ಟಿಕೆಟ್ ಗಿಟ್ಟಿಸಲು RSS ರಾಷ್ಟ್ರೀಯ ಪ್ರಮುಖರ ಶಿಫಾರಸ್ಸು ಇರಬೇಕು. RSS ಹಿರಿಯ ಪ್ರಚಾರಕ ವಿಶ್ವನಾಥ್ ಜಿ ಮೂಲಕ ಶಿಫಾರಸ್ಸು ಮಾಡೋದಾಗಿ ಭರವಸೆ ನೀಡಿದ್ದು, ಚಿಕ್ಕಮಗಳೂರಲ್ಲಿ ವಿಶ್ವನಾಥ್ ಜೀ ಅಂತಾ ಬೇರೊಬ್ಬನನ್ನ ಭೇಟಿ ಮಾಡಿಸಿ ವಂಚಿಸಿದ್ದಾಳೆ ಎಂದು ಗೋವಿಂದ ಬಾಬು ಪೂಜಾರಿ ದೂರಿದ್ದಾರೆ.


ರಮೇಶ್ ಎಂಬಾತನನ್ನ ಇವರೆ ವಿಶ್ವನಾಥ್ ಎಂದು ಪರಿಚಯ ಮಾಡಿಸಿದ್ದಾಳೆ. ಸಲೂನ್ ಶಾಪ್‌ ನಲ್ಲಿ RSS ಪ್ರಚಾರಕರ ರೀತಿ ಮೇಕಪ್ ಮಾಡಿಸಿ. ನಾನು ಕೇಂದ್ರ ಬಿಜೆಪಿ ಆಯ್ಕೆ ಸಮಿತಿ ಸದಸ್ಯನಾಗಿದ್ದೇನೆ. RSS ಮತ್ತು ಬಿಜೆಪಿ ಸಮನ್ವಯಕಾರನಾಗಿದ್ದೇನೆ. ಟಿಕೆಟ್ ವಿಚಾರದಲ್ಲಿ ನನ್ನ ನಿರ್ಧಾರವೇ ಅಂತಿಮವಾಗಿರುತ್ತೆ. ಆದರೆ ಸಾಕಷ್ಟು ಹಣ ನೀಡಿದರೆ ಮಾತ್ರ ಟಿಕೆಟ್ ಸಿಗುತ್ತದೆ. ಟಿಕೆಟ್ ಪ್ರಕ್ರಿಯೆ ಆರಂಭಿಸಲು ಮೂರು ದಿನದಲ್ಲಿ 50 ಲಕ್ಷ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾಳೆ. ಆಯ್ಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ 3 ಕೋಟಿ ನೀಡುವಂತೆ ಹೇಳಿದ್ದು, ಟಿಕೆಟ್ ಸಿಗದಿದ್ರೆ ಎಲ್ಲಾ ಹಣ ವಾಪಸ್ಸು ಕೊಡೋದಾಗಿ ಭರವಸೆ ನೀಡಿದ್ದಾಳೆ. ಈ ಮಾತನ್ನ ನಂಬಿ 7-7-2022 ರಂದು 50 ಲಕ್ಷ ರೂಪಾಯಿಯನ್ನ ಗೋವಿಂದ ಬಾಬು ಪೂಜಾರಿ ನೀಡಿದ್ದಾರೆ.

ವಿಶ್ವನಾಥ್, ಗಗನ್, ಚೈತ್ರಾ ಸೇರಿ ಗೋವಿಂದ ಬಾಬು ಪೂಜಾರಿಗೆ ಕಾನ್ಫರೆನ್ಸ್ ಕರೆ ಮಾಡಿ ವಂಚಿಸಿದ್ದಾರೆ. ಬೈಂದೂರಿನಿಂದ ಸ್ಪರ್ಧಿಸಲು ಟಿಕೆಟ್ ನೀಡಲು ಕೇಂದ್ರ ಬಿಜೆಪಿ ನಾಯಕರು ಒಪ್ಪಿರೋದಾಗಿ ಹೇಳಿದ್ದು, ಪ್ರಸಾದ್ ಬೈಂದೂರು ಮೂಲಕ ಗಗನ್ ಗೆ ಗೋವಿಂದ ಪೂಜಾರಿ ಹಣ ನೀಡಿದ್ದಾರೆ.
ಈ ವೇಳೆ ಹಿರಿಯ ಹಡಗಲಿ ಅಭಿನವ ಹಾಲಶ್ರೀ ಸ್ವಾಮೀಜಿ ಶಿಫಾರಸ್ಸು ಕೂಡ ಮುಖ್ಯ ಎಂದು ಅವರನ್ನು ಭೇಟಿ ಆಗಲು ಗೋವಿಂದ ಪೂಜಾರಿ ತೆರಳಿದ್ದಾರೆ. ಬಳಿಕ ಮುಂದಿನ ಪ್ರಕ್ರಿಯೆಗೆ 1.5 ಕೋಟಿ ನೀಡುವಂತೆ ಸ್ವಾಮೀಜಿ ಸೂಚಿಸಿದ್ದು, ಈ ಹಣವನ್ನು ಗೋವಿಂದ ಬಾಬು ಪೂಜಾರಿ ನೀಡಿದ್ದರು.ಇದರ ಜೊತೆಗೆ ಕಬಾಬ್ ವ್ಯಾಪಾರಿ ನಾಯ್ಕ್ ಎಂಬಾತನನ್ನು ಚೈತ್ರಾ ಆ್ಯಂಡ್​ ಟೀಂ ಚುನಾವಣಾ ಸಮಿತಿ ಸದಸ್ಯ ಎಂದು ಪರಿಚಯ ಮಾಡಿಕೊಂಡಿದ್ದರು. 23 ಅಕ್ಟೋಬರ್ 2022 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಪ್ರಮುಖರು ಬೆಂಗಳೂರಿಗೆ ಬರ್ತಿದ್ದಾರೆ. ಈ ವೇಳೆ ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಆತ ತಂಗಿದ್ದು, ಹಂತ ಹಂತವಾಗಿ ಒಟ್ಟು ಐದು ಕೋಟಿ ವಂಚನೆ ಮಾಡಿದ್ದಾಳೆ ಎಂದು ಗೋವಿಂದ ಬಾಬು ಪೂಜಾರಿ ಆರೋಪಿಸಿದ್ದಾರೆ.

ಇನ್ನು ಟಿಕೆಟ್ ಕೈ ತಪ್ಪಿದಕ್ಕೆ ಪ್ರಶ್ನೆ ಮಾಡಿದ್ದ ಗೋವಿಂದ ಬಾಬುಗೆ ವಿಶ್ವನಾಥ್ ಜೀ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾಳೆ. ಅಂತ್ಯಸಂಸ್ಕಾರಕ್ಕೆ ಹೋಗೋಣ ಎಂದಿದ್ದಕ್ಕೆ. ಆರ್ ಎಸ್ ಎಸ್ ನಲ್ಲಿ ಈ ರೀತಿ ಸಾವಿಗೆ ಹೋಗೋ ಹಾಗಿಲ್ಲ. ಕುಟುಂಬದವ್ರೇ ಸೇರಿ ಕಾಶ್ಮೀರದಲ್ಲೇ ಅಂತ್ಯ ಸಂಸ್ಕಾರ ಮಾಡಿದ್ದಾಗಿ ಹೇಳಿ ಪಂಗನಾಮ ಹಾಕಿದ್ದಾಳೆ ಎಂದು ವಂಚನೆಗೊಳಗಾದ ವ್ಯಕ್ತಿ ಹೇಳಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago