ಕರಾವಳಿ

ವಂಚನೆಯಲ್ಲಿ ಚೈತ್ರಾನಿಗೆ ಸಾಥ್‌ ಕೊಟ್ಟ ಗಗನ್​ ಕಡೂರ್​ನನ್ನು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕಿತ್ತೆಸೆದ ಜಿಲ್ಲಾ ಯುವಮೋರ್ಚಾ..!!

ನಕಲಿ RSS ಪ್ರಚಾರದ ವ್ಯಕ್ತಿಯನ್ನ ಸೃಷ್ಟಿಸಿರುವ ಆರೋಪದಡಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಗಗನ್​ ಕಡೂರ್​ ನನ್ನು ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿಗೆ ಟಿಕೆಟ್​ ಕೊಡಿಸುತ್ತೇನೆ ಎಂಬ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗಗನ್​ ಕಡೂರ್​ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಗಗನ್​ನನ್ನು ಪಕ್ಷದ ಸ್ಥಾನದಿಂದ ವಿಮುಕ್ತಿಗೊಳಿಸಿದ್ದಾರೆ.

ಬಿಜೆಪಿ ಟಿಕೆಟ್​ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಎಂಬವರಿಗೆ ಚೈತ್ರಾ ಕುಂದಾಪುರ 5 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಗಗನ್​ ಕಡೂರ್​ RSS ಹಿರಿಯ ಪ್ರಚಾರಕನೆಂದು ವಿಶ್ವನಾಥ್​ ಎಂಬವರ ಹೆಸರನ್ನು ಸೃಷ್ಟಿಸಿ ಅವರ ಮೂಲಕ ಶಿಫಾರಸ್ಸು ಮಾಡೋದಾಗಿ ಭರವಸೆ ನೀಡಿದ್ದಾನೆ. ಎಂಬ ಮಾಹಿತಿ ಲಭ್ಯವಾಗಿದೆ. ಅದಲ್ಲದೇ ಈ ಖತರ್ನಾಕ್‌ ಚಿಕ್ಕಮಗಳೂರಲ್ಲಿ ವಿಶ್ವನಾಥ್ ಜೀ ಅಂತಾ ಬೇರೊಬ್ಬನನ್ನ ಭೇಟಿ ಮಾಡಿಸಿ ಮಹಾ ಮೋಸವನ್ನು ಮಾಡಿದ್ದಾನೆ. ಇದೀಗ ಆರೋಪಿಗಳು ಸಿಸಿಬಿ ಪೊಲೀಸರ ತೆಕ್ಕೆಗೆ ಬಿದ್ದಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago