ಜನ ಮನದ ನಾಡಿ ಮಿಡಿತ

Advertisement

ಬೀರಬಲ್‌ ಖ್ಯಾತಿಯ ಹಿರಿಯ ಹಾಸ್ಯನಟ ಸತೀಂದರ್ ಕುಮಾರ್ ಖೋಸ್ಲಾ ನಿಧನ

ಹಿರಿಯ ಹಾಸ್ಯ ನಟ ಸತಿಂದರ್‌ ಕುಮಾರ್‌ ಖೋಸ್ಲಾ ಅವರು ಮುಂಬೈನ ಕೋಕಿಲಾಬೆನ್‌ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  

ಭಾರತೀಯ ಚಿತ್ರರಂಗದ ದಿಗ್ಗಜ ಸತೀಂದ್ರ ಕುಮಾರ್ ಖೋಸ್ಲಾ ನಿಧನಕ್ಕೆ ಬಾಲಿವುಡ್‌ ಮಂದಿ ಮಿಡಿಯುತ್ತಿದ್ದಾರೆ. ಸತೀಂದರ್ ಕುಮಾರ್ ಖೋಸ್ಲಾ ಅವರು 1938ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ್ದು, 1967 ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಖೋಸ್ಲಾ ಅವರ ಹಿಟ್​ ಸಿನಿಮಾಗಳು: ಖೋಸ್ಲಾ ಅವರು ದೋ ಬದನ್ (1966), ಬೂಂದ್ ಜೋ ಬಾನ್ ಗೈ ಮೋತಿ (1967) ನಟಿಸಿದರು. ಬಳಿಕ ನಟ ಮನೋಜ್ ಕುಮಾರ್ ಅವರ ಸಲಹೆಯಂತೆ ತಮ್ಮ ಹೆಸರನ್ನು ಬೀರ್​ಬಲ್​ ಎಂದು ಬದಲಾಯಿಸಿಕೊಂಡರು. ಮನೋಜ್ ಕುಮಾರ್ ಅವರ ರೋಟಿ ಕಪ್ಡಾ ಔರ್ ಮಕನ್ (1974) ಮತ್ತು ಕ್ರಾಂತಿ (1981) ಚಿತ್ರಗಳಲ್ಲಿನ ಅವರ ಪಾತ್ರಗಳು ಗಮನ ಸೆಳೆದಿವೆ. ಶೋಲೆ (1975), ಸೊರಜ್ (1977) ಚಿತ್ರಗಳಲ್ಲಿ ಅವರು ಅರ್ಧ ಮೀಸೆಯ ಕೈದಿಯಾಗಿ ನಟನೆ, ದೇವ್ ಆನಂದ್ ಅವರ ಅಮೀರ್ ಗರೀಬ್ (1974) ನಲ್ಲಿ ನಕ್ಕು ನಲಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!