ಹಿರಿಯ ಹಾಸ್ಯ ನಟ ಸತಿಂದರ್ ಕುಮಾರ್ ಖೋಸ್ಲಾ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಚಿತ್ರರಂಗದ ದಿಗ್ಗಜ ಸತೀಂದ್ರ ಕುಮಾರ್ ಖೋಸ್ಲಾ ನಿಧನಕ್ಕೆ ಬಾಲಿವುಡ್ ಮಂದಿ ಮಿಡಿಯುತ್ತಿದ್ದಾರೆ. ಸತೀಂದರ್ ಕುಮಾರ್ ಖೋಸ್ಲಾ ಅವರು 1938ರಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಜನಿಸಿದ್ದು, 1967 ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಖೋಸ್ಲಾ ಅವರ ಹಿಟ್ ಸಿನಿಮಾಗಳು: ಖೋಸ್ಲಾ ಅವರು ದೋ ಬದನ್ (1966), ಬೂಂದ್ ಜೋ ಬಾನ್ ಗೈ ಮೋತಿ (1967) ನಟಿಸಿದರು. ಬಳಿಕ ನಟ ಮನೋಜ್ ಕುಮಾರ್ ಅವರ ಸಲಹೆಯಂತೆ ತಮ್ಮ ಹೆಸರನ್ನು ಬೀರ್ಬಲ್ ಎಂದು ಬದಲಾಯಿಸಿಕೊಂಡರು. ಮನೋಜ್ ಕುಮಾರ್ ಅವರ ರೋಟಿ ಕಪ್ಡಾ ಔರ್ ಮಕನ್ (1974) ಮತ್ತು ಕ್ರಾಂತಿ (1981) ಚಿತ್ರಗಳಲ್ಲಿನ ಅವರ ಪಾತ್ರಗಳು ಗಮನ ಸೆಳೆದಿವೆ. ಶೋಲೆ (1975), ಸೊರಜ್ (1977) ಚಿತ್ರಗಳಲ್ಲಿ ಅವರು ಅರ್ಧ ಮೀಸೆಯ ಕೈದಿಯಾಗಿ ನಟನೆ, ದೇವ್ ಆನಂದ್ ಅವರ ಅಮೀರ್ ಗರೀಬ್ (1974) ನಲ್ಲಿ ನಕ್ಕು ನಲಿಸಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…