ಹಿರಿಯ ಹಾಸ್ಯ ನಟ ಸತಿಂದರ್ ಕುಮಾರ್ ಖೋಸ್ಲಾ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಚಿತ್ರರಂಗದ ದಿಗ್ಗಜ ಸತೀಂದ್ರ ಕುಮಾರ್ ಖೋಸ್ಲಾ ನಿಧನಕ್ಕೆ ಬಾಲಿವುಡ್ ಮಂದಿ ಮಿಡಿಯುತ್ತಿದ್ದಾರೆ. ಸತೀಂದರ್ ಕುಮಾರ್ ಖೋಸ್ಲಾ ಅವರು 1938ರಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಜನಿಸಿದ್ದು, 1967 ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಖೋಸ್ಲಾ ಅವರ ಹಿಟ್ ಸಿನಿಮಾಗಳು: ಖೋಸ್ಲಾ ಅವರು ದೋ ಬದನ್ (1966), ಬೂಂದ್ ಜೋ ಬಾನ್ ಗೈ ಮೋತಿ (1967) ನಟಿಸಿದರು. ಬಳಿಕ ನಟ ಮನೋಜ್ ಕುಮಾರ್ ಅವರ ಸಲಹೆಯಂತೆ ತಮ್ಮ ಹೆಸರನ್ನು ಬೀರ್ಬಲ್ ಎಂದು ಬದಲಾಯಿಸಿಕೊಂಡರು. ಮನೋಜ್ ಕುಮಾರ್ ಅವರ ರೋಟಿ ಕಪ್ಡಾ ಔರ್ ಮಕನ್ (1974) ಮತ್ತು ಕ್ರಾಂತಿ (1981) ಚಿತ್ರಗಳಲ್ಲಿನ ಅವರ ಪಾತ್ರಗಳು ಗಮನ ಸೆಳೆದಿವೆ. ಶೋಲೆ (1975), ಸೊರಜ್ (1977) ಚಿತ್ರಗಳಲ್ಲಿ ಅವರು ಅರ್ಧ ಮೀಸೆಯ ಕೈದಿಯಾಗಿ ನಟನೆ, ದೇವ್ ಆನಂದ್ ಅವರ ಅಮೀರ್ ಗರೀಬ್ (1974) ನಲ್ಲಿ ನಕ್ಕು ನಲಿಸಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…