ಜನ ಮನದ ನಾಡಿ ಮಿಡಿತ

Advertisement

ಸೈನಿಕರ ರಕ್ಷಣೆಗೆ ತನ್ನ ಪ್ರಾಣವನ್ನು ಅರ್ಪಿಸಿದ ಶ್ವಾನ…!

ಭಾರತೀಯ ಸೇನೆಗೆ ಕಾವಲು ಮತ್ತು ರೈಟ್ ಹ್ಯಾಂಡ್ ಆಗಿ ಕೆಲಸ ಮಾಡುತ್ತಿದ್ದ, 6 ವರ್ಷದ ಶ್ವಾನ ಉಗ್ರರ ಗುಂಡೇಟಿಗೆ ಬಲಿಯಾದ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸೇನೆಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಭದ್ರತಾ ಪಡೆಯ ರಕ್ಷಣೆಗೆ ಶ್ವಾನ ಮುಂದಾಗಿದೆ.

ಇನ್ನೂ ಆರು ವರ್ಷದ ಹೆಣ್ಣು ಲ್ಯಾಬ್ರಡಾರ್ ಕೆಂಟ್ 21st Army Dog Unitನಲ್ಲಿ ಸೇವೆ ಸಲ್ಲಿಸುತ್ತಿತ್ತು. ತನ್ನ ಮಾರ್ಗದರ್ಶಕನನ್ನು ರಕ್ಷಿಸುವ ಭರದಲ್ಲಿ ತನ್ನ ಪ್ರಾಣವನ್ನೇ ಅರ್ಪಿಸಿದೆ ಎಂದು ಸೇನಾಪಡೆ ಮಾಹಿತಿ ನೀಡಿದೆ. ಈ ಹಿಂದೆ ಉಗ್ರರನ್ನು ಗುರುತಿಸೋದ್ರಲ್ಲಿ ಮತ್ತು ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕೆಂಟ್ ಉಗ್ರರು ಹಾರಿಸಿದ ಗುಂಡಿ ಏಟು ತಗಲಿ ಇಹಲೋಕ ತ್ಯಜಿಸಿದೆ.

ಇನ್ನೂ ಉಗ್ರರ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು ವಲಯದ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ರಜೌರಿಯ ನರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆಗ ಸೇನೆ ನಡೆಸಿದ ಎನ್​​ಕೌಂಟರ್​ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಇದೇ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಹತ್ಯೆಯಾಗಿರುವ ಉಗ್ರ ಪಾಕಿಸ್ತಾನ ಮೂಲದವ ಎಂದು ಶಂಕಿಸಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!