ಭಾರತೀಯ ಸೇನೆಗೆ ಕಾವಲು ಮತ್ತು ರೈಟ್ ಹ್ಯಾಂಡ್ ಆಗಿ ಕೆಲಸ ಮಾಡುತ್ತಿದ್ದ, 6 ವರ್ಷದ ಶ್ವಾನ ಉಗ್ರರ ಗುಂಡೇಟಿಗೆ ಬಲಿಯಾದ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸೇನೆಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಭದ್ರತಾ ಪಡೆಯ ರಕ್ಷಣೆಗೆ ಶ್ವಾನ ಮುಂದಾಗಿದೆ.
ಇನ್ನೂ ಆರು ವರ್ಷದ ಹೆಣ್ಣು ಲ್ಯಾಬ್ರಡಾರ್ ಕೆಂಟ್ 21st Army Dog Unitನಲ್ಲಿ ಸೇವೆ ಸಲ್ಲಿಸುತ್ತಿತ್ತು. ತನ್ನ ಮಾರ್ಗದರ್ಶಕನನ್ನು ರಕ್ಷಿಸುವ ಭರದಲ್ಲಿ ತನ್ನ ಪ್ರಾಣವನ್ನೇ ಅರ್ಪಿಸಿದೆ ಎಂದು ಸೇನಾಪಡೆ ಮಾಹಿತಿ ನೀಡಿದೆ. ಈ ಹಿಂದೆ ಉಗ್ರರನ್ನು ಗುರುತಿಸೋದ್ರಲ್ಲಿ ಮತ್ತು ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕೆಂಟ್ ಉಗ್ರರು ಹಾರಿಸಿದ ಗುಂಡಿ ಏಟು ತಗಲಿ ಇಹಲೋಕ ತ್ಯಜಿಸಿದೆ.
ಇನ್ನೂ ಉಗ್ರರ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು ವಲಯದ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ರಜೌರಿಯ ನರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆಗ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಇದೇ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಹತ್ಯೆಯಾಗಿರುವ ಉಗ್ರ ಪಾಕಿಸ್ತಾನ ಮೂಲದವ ಎಂದು ಶಂಕಿಸಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…