ಜನ ಮನದ ನಾಡಿ ಮಿಡಿತ

Advertisement

ಅಮ್ಟಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ನಾಪತ್ತೆ..!!

ಬಂಟ್ವಾಳ: ಅಮ್ಟಾಡಿ ಗ್ರಾಮಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (75) ಎಂಬವರು ನಾಪತ್ತೆಯಾಗಿದ್ದು, ಅವರ ಮೊಬೈಲ್ ವಾಲ್ಪಾಡಿಯ ಕೊಯಕ್ಕುಡೆ ಚಡಾವ್ ಎಂಬಲ್ಲಿ ಪತ್ತೆಯಾಗಿದೆ. ಪಂಚಾಯತ್ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಅವರ ನಾಪತ್ತೆ ಬಗ್ಗೆ ಅವರ ಪತ್ನಿ ವಂದನಾ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅದರಂತೆ ಅವರ ಮೊಬೈಲ್ ಲೊಕೇಶನ್ ಹಾಕಿದಾಗ ವಾಲ್ಪಾಡಿ ಕೊಯಕುಡೆ ಚಡಾವ್ ತೋರಿಸುತ್ತಿದ್ದುದರಿಂದ ಪುಂಜಾಲಕಟ್ಟೆ ಪೊಲೀಸರು ಮತ್ತು ಸಂಬಂಧಿಕರು ಹುಡುಕಾಡಿಕೊಂಡು ಬಂದಿದ್ದರು. ಅದರೆ ಅವರ ಮೊಬೈಲ್ ಮಾತ್ರ ರಸ್ತೆ ಬದಿ ಪತ್ತೆಯಾಗಿದ್ದು ಬೈಕ್ ನಲ್ಲಿ ಬಂದಿದ್ದ ಲಕ್ಷ್ಮೀನಾರಾಯಣ ಪತ್ತೆಯಾಗಿಲ್ಲ.


ಕೆ.ಎ.-21 , EC 5599 ನಂಬರ್ ನ ಹೀರೊ ನೀಲಿ ಬಣ್ಣದ ಬೈಕ್ ನಲ್ಲಿ ಅವರು ಬಂದಿದ್ದರೆನ್ನಲಾಗಿದೆ‌ .ಮೊಬೈಲ್ ನ್ನು ವಾಲ್ಪಾಡಿಯಲ್ಲಿ ಎಸೆದು ಬೈಕ್ ನಲ್ಲಿ ಹೋಗಿರಬಹುದೆಂದು ಹೇಳಲಾಗುತ್ತಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸೆ. 8 ರಂದು ಅಮ್ಟಾಡಿ ಗ್ರಾ.ಪಂ‌‌.ನಲ್ಲಿ ಗ್ರಾಮ ಸಭೆನಡೆದ ಬಳಿಕ ಇವರು ತುಂಬಾ ಒತ್ತಡದಲ್ಲಿದ್ದರು ಎಂದು ಹೇಳಲಾಗಿದ್ದು, ಮಾನಸಿಕವಾಗಿ ನೊಂದುಕೊಂಡಿದ್ದ ಅವರು ಇತ್ತೀಚೆಗೆ ಬಹಳಷ್ಟು ಕುಗ್ಗಿ ಹೋಗಿದ್ದರು. ಇಲ್ಲಿನ ಪಿ.ಡಿ.ಒ.ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಇವರಿಗೆ ಹೆಚ್ಚವರಿಯಾಗಿ ಪಿ.ಡಿ.ಒ.ಹುದ್ದೆಯನ್ನು ನೀಡಲಾಗಿತ್ತು.
ಆದರೆ ಇವರು ಎರಡು ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗದೆ ನೊಂದುಕೊಂಡಿದ್ದರು, ಒತ್ತಡದಿಂದ ಇವರು ಅನಾರೋಗ್ಯಕ್ಕೆ ತುತ್ತಾಗಿದ್ದಾರಾ? ಎಂಬ ಪ್ರಶ್ನೆಯನ್ನು ಹಾಕುತ್ತಿದ್ದಾರೆ.
ಅವರು ನಿನ್ನೆ ಅಂದರೆ ಸೆ. 12 ರಂದುಮಧ್ಯಾಹ್ನ 12 ಗಂಟೆವರೆಗೆ ಆಫೀಸಿಗೆ ಬರದ ಕಾರಣ ಇಲ್ಲಿನ ಸಿಬ್ಬಂದಿ ಪೋನ್ ಮಾಡಿದಾಗ ನನಗೆ ಹುಷಾರಿಲ್ಲ ಕೆಲವೊಂದು ಟೆಸ್ಟ್ ಗಳನ್ನು ಇಸಿಜಿ‌ಸಹಿತ ಇನ್ನೂ ಕೆಲವು ಪರೀಕ್ಷೆ ನಡೆಸಿ ಮತ್ತೆ ಬರುವುದಾಗಿ ತಿಳಿಸಿದ್ದರಂತೆ. ಆ ಬಳಿಕ ಅಫೀಸಿಗೆ ಬರದೆ ಮನೆಗೂ ಹೋಗದೆ ಪೋನ್ ಸ್ವೀಚ್ ಆಫ್ ಆಗಿದ್ದು ಪತ್ತೆಯಿಲ್ಲ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!