ಬಂಟ್ವಾಳ: ಅಮ್ಟಾಡಿ ಗ್ರಾಮಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (75) ಎಂಬವರು ನಾಪತ್ತೆಯಾಗಿದ್ದು, ಅವರ ಮೊಬೈಲ್ ವಾಲ್ಪಾಡಿಯ ಕೊಯಕ್ಕುಡೆ ಚಡಾವ್ ಎಂಬಲ್ಲಿ ಪತ್ತೆಯಾಗಿದೆ. ಪಂಚಾಯತ್ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಅವರ ನಾಪತ್ತೆ ಬಗ್ಗೆ ಅವರ ಪತ್ನಿ ವಂದನಾ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅದರಂತೆ ಅವರ ಮೊಬೈಲ್ ಲೊಕೇಶನ್ ಹಾಕಿದಾಗ ವಾಲ್ಪಾಡಿ ಕೊಯಕುಡೆ ಚಡಾವ್ ತೋರಿಸುತ್ತಿದ್ದುದರಿಂದ ಪುಂಜಾಲಕಟ್ಟೆ ಪೊಲೀಸರು ಮತ್ತು ಸಂಬಂಧಿಕರು ಹುಡುಕಾಡಿಕೊಂಡು ಬಂದಿದ್ದರು. ಅದರೆ ಅವರ ಮೊಬೈಲ್ ಮಾತ್ರ ರಸ್ತೆ ಬದಿ ಪತ್ತೆಯಾಗಿದ್ದು ಬೈಕ್ ನಲ್ಲಿ ಬಂದಿದ್ದ ಲಕ್ಷ್ಮೀನಾರಾಯಣ ಪತ್ತೆಯಾಗಿಲ್ಲ.
ಕೆ.ಎ.-21 , EC 5599 ನಂಬರ್ ನ ಹೀರೊ ನೀಲಿ ಬಣ್ಣದ ಬೈಕ್ ನಲ್ಲಿ ಅವರು ಬಂದಿದ್ದರೆನ್ನಲಾಗಿದೆ .ಮೊಬೈಲ್ ನ್ನು ವಾಲ್ಪಾಡಿಯಲ್ಲಿ ಎಸೆದು ಬೈಕ್ ನಲ್ಲಿ ಹೋಗಿರಬಹುದೆಂದು ಹೇಳಲಾಗುತ್ತಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸೆ. 8 ರಂದು ಅಮ್ಟಾಡಿ ಗ್ರಾ.ಪಂ.ನಲ್ಲಿ ಗ್ರಾಮ ಸಭೆನಡೆದ ಬಳಿಕ ಇವರು ತುಂಬಾ ಒತ್ತಡದಲ್ಲಿದ್ದರು ಎಂದು ಹೇಳಲಾಗಿದ್ದು, ಮಾನಸಿಕವಾಗಿ ನೊಂದುಕೊಂಡಿದ್ದ ಅವರು ಇತ್ತೀಚೆಗೆ ಬಹಳಷ್ಟು ಕುಗ್ಗಿ ಹೋಗಿದ್ದರು. ಇಲ್ಲಿನ ಪಿ.ಡಿ.ಒ.ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಇವರಿಗೆ ಹೆಚ್ಚವರಿಯಾಗಿ ಪಿ.ಡಿ.ಒ.ಹುದ್ದೆಯನ್ನು ನೀಡಲಾಗಿತ್ತು.
ಆದರೆ ಇವರು ಎರಡು ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗದೆ ನೊಂದುಕೊಂಡಿದ್ದರು, ಒತ್ತಡದಿಂದ ಇವರು ಅನಾರೋಗ್ಯಕ್ಕೆ ತುತ್ತಾಗಿದ್ದಾರಾ? ಎಂಬ ಪ್ರಶ್ನೆಯನ್ನು ಹಾಕುತ್ತಿದ್ದಾರೆ.
ಅವರು ನಿನ್ನೆ ಅಂದರೆ ಸೆ. 12 ರಂದುಮಧ್ಯಾಹ್ನ 12 ಗಂಟೆವರೆಗೆ ಆಫೀಸಿಗೆ ಬರದ ಕಾರಣ ಇಲ್ಲಿನ ಸಿಬ್ಬಂದಿ ಪೋನ್ ಮಾಡಿದಾಗ ನನಗೆ ಹುಷಾರಿಲ್ಲ ಕೆಲವೊಂದು ಟೆಸ್ಟ್ ಗಳನ್ನು ಇಸಿಜಿಸಹಿತ ಇನ್ನೂ ಕೆಲವು ಪರೀಕ್ಷೆ ನಡೆಸಿ ಮತ್ತೆ ಬರುವುದಾಗಿ ತಿಳಿಸಿದ್ದರಂತೆ. ಆ ಬಳಿಕ ಅಫೀಸಿಗೆ ಬರದೆ ಮನೆಗೂ ಹೋಗದೆ ಪೋನ್ ಸ್ವೀಚ್ ಆಫ್ ಆಗಿದ್ದು ಪತ್ತೆಯಿಲ್ಲ ಎಂದು ಹೇಳಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…