ಬಂಟ್ವಾಳ: ಅಮ್ಟಾಡಿ ಗ್ರಾಮಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (75) ಎಂಬವರು ನಾಪತ್ತೆಯಾಗಿದ್ದು, ಅವರ ಮೊಬೈಲ್ ವಾಲ್ಪಾಡಿಯ ಕೊಯಕ್ಕುಡೆ ಚಡಾವ್ ಎಂಬಲ್ಲಿ ಪತ್ತೆಯಾಗಿದೆ. ಪಂಚಾಯತ್ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಅವರ ನಾಪತ್ತೆ ಬಗ್ಗೆ ಅವರ ಪತ್ನಿ ವಂದನಾ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅದರಂತೆ ಅವರ ಮೊಬೈಲ್ ಲೊಕೇಶನ್ ಹಾಕಿದಾಗ ವಾಲ್ಪಾಡಿ ಕೊಯಕುಡೆ ಚಡಾವ್ ತೋರಿಸುತ್ತಿದ್ದುದರಿಂದ ಪುಂಜಾಲಕಟ್ಟೆ ಪೊಲೀಸರು ಮತ್ತು ಸಂಬಂಧಿಕರು ಹುಡುಕಾಡಿಕೊಂಡು ಬಂದಿದ್ದರು. ಅದರೆ ಅವರ ಮೊಬೈಲ್ ಮಾತ್ರ ರಸ್ತೆ ಬದಿ ಪತ್ತೆಯಾಗಿದ್ದು ಬೈಕ್ ನಲ್ಲಿ ಬಂದಿದ್ದ ಲಕ್ಷ್ಮೀನಾರಾಯಣ ಪತ್ತೆಯಾಗಿಲ್ಲ.
ಕೆ.ಎ.-21 , EC 5599 ನಂಬರ್ ನ ಹೀರೊ ನೀಲಿ ಬಣ್ಣದ ಬೈಕ್ ನಲ್ಲಿ ಅವರು ಬಂದಿದ್ದರೆನ್ನಲಾಗಿದೆ .ಮೊಬೈಲ್ ನ್ನು ವಾಲ್ಪಾಡಿಯಲ್ಲಿ ಎಸೆದು ಬೈಕ್ ನಲ್ಲಿ ಹೋಗಿರಬಹುದೆಂದು ಹೇಳಲಾಗುತ್ತಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸೆ. 8 ರಂದು ಅಮ್ಟಾಡಿ ಗ್ರಾ.ಪಂ.ನಲ್ಲಿ ಗ್ರಾಮ ಸಭೆನಡೆದ ಬಳಿಕ ಇವರು ತುಂಬಾ ಒತ್ತಡದಲ್ಲಿದ್ದರು ಎಂದು ಹೇಳಲಾಗಿದ್ದು, ಮಾನಸಿಕವಾಗಿ ನೊಂದುಕೊಂಡಿದ್ದ ಅವರು ಇತ್ತೀಚೆಗೆ ಬಹಳಷ್ಟು ಕುಗ್ಗಿ ಹೋಗಿದ್ದರು. ಇಲ್ಲಿನ ಪಿ.ಡಿ.ಒ.ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಇವರಿಗೆ ಹೆಚ್ಚವರಿಯಾಗಿ ಪಿ.ಡಿ.ಒ.ಹುದ್ದೆಯನ್ನು ನೀಡಲಾಗಿತ್ತು.
ಆದರೆ ಇವರು ಎರಡು ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗದೆ ನೊಂದುಕೊಂಡಿದ್ದರು, ಒತ್ತಡದಿಂದ ಇವರು ಅನಾರೋಗ್ಯಕ್ಕೆ ತುತ್ತಾಗಿದ್ದಾರಾ? ಎಂಬ ಪ್ರಶ್ನೆಯನ್ನು ಹಾಕುತ್ತಿದ್ದಾರೆ.
ಅವರು ನಿನ್ನೆ ಅಂದರೆ ಸೆ. 12 ರಂದುಮಧ್ಯಾಹ್ನ 12 ಗಂಟೆವರೆಗೆ ಆಫೀಸಿಗೆ ಬರದ ಕಾರಣ ಇಲ್ಲಿನ ಸಿಬ್ಬಂದಿ ಪೋನ್ ಮಾಡಿದಾಗ ನನಗೆ ಹುಷಾರಿಲ್ಲ ಕೆಲವೊಂದು ಟೆಸ್ಟ್ ಗಳನ್ನು ಇಸಿಜಿಸಹಿತ ಇನ್ನೂ ಕೆಲವು ಪರೀಕ್ಷೆ ನಡೆಸಿ ಮತ್ತೆ ಬರುವುದಾಗಿ ತಿಳಿಸಿದ್ದರಂತೆ. ಆ ಬಳಿಕ ಅಫೀಸಿಗೆ ಬರದೆ ಮನೆಗೂ ಹೋಗದೆ ಪೋನ್ ಸ್ವೀಚ್ ಆಫ್ ಆಗಿದ್ದು ಪತ್ತೆಯಿಲ್ಲ ಎಂದು ಹೇಳಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…