ಜನ ಮನದ ನಾಡಿ ಮಿಡಿತ

Advertisement

ರಸ್ತೆಗೆ ಹರಿಯುತ್ತಿದ್ದ ರಕ್ತ ಮಿಶ್ರಿತ ಕೊಳಚೆ ನೀರಿಗೆ ಪುರಸಭೆಯಿಂದ ಶಾಶ್ವತ ಪರಿಹಾರ

ಮೂಡುಬಿದಿರೆಯ ಮಾರ್ಕೆಟ್ ನಲ್ಲಿರುವ ಮಾಂಸದಂಗಡಿಗಳಿಂದ ಕಡಿದಿರುವ ಕುರಿ, ಕೋಳಿ, ಆಡುಗಳ ರಕ್ತ ಮತ್ತು ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯದಂತೆ ಮೂಡುಬಿದಿರೆ ಪುರಸಭೆಯ ಅಧಿಕಾರಿಗಳು ಶಾಶ್ವತ ಪರಿಹಾರ ನೀಡಿದ್ದಾರೆ.

ಮಾರ್ಕೆಟಿನಲ್ಲಿ ವ್ಯಾಪಾರ ಮಾಡುತ್ತಿರುವ ಮಾಂಸದಂಗಡಿಗಳಿಂದ ಕೆಲವು ದಿನಗಳಿಂದ ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯುತ್ತಿದ್ದು, ಇದರಿಂದ ಓಡಾಡುತ್ತಿರುವ ಪಾದಾಚಾರಿಗಳು ಮತ್ತು ಅಲ್ಲಿಯೇ ಪಕ್ಕದಲ್ಲಿ ಇತರ ವ್ಯಾಪಾರ ನಡೆಸುತ್ತಿರುವ ಅಂಗಡಿಯವರು ತೊಂದರೆಯನ್ನನ್ನು ಅನುಭವಿಸುತ್ತಿದ್ದರು.


ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯೂ ಪ್ರಸಾರಗೊಂಡಿತ್ತು. ಇದೀಗ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡು ರಸ್ತೆಯ ಬದಿಗಳಲ್ಲಿ ಹರಿಯುತ್ತಿದ್ದ ನೀರು ಪೈಪ್ ಮೂಲಕ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಮುಖ್ಯಾಧಿಕಾರಿ ಇಂದು ಅವರ ಕಾರ್ಯ ವೈಖರಿಯನ್ನು ಸ್ಥಳೀಯರು ಪ್ರಶಂಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಸಿಬಂದಿ ಸುಧೀಶ್ ಹೆಗ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!