ಮೂಡುಬಿದಿರೆಯ ಮಾರ್ಕೆಟ್ ನಲ್ಲಿರುವ ಮಾಂಸದಂಗಡಿಗಳಿಂದ ಕಡಿದಿರುವ ಕುರಿ, ಕೋಳಿ, ಆಡುಗಳ ರಕ್ತ ಮತ್ತು ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯದಂತೆ ಮೂಡುಬಿದಿರೆ ಪುರಸಭೆಯ ಅಧಿಕಾರಿಗಳು ಶಾಶ್ವತ ಪರಿಹಾರ ನೀಡಿದ್ದಾರೆ.
ಮಾರ್ಕೆಟಿನಲ್ಲಿ ವ್ಯಾಪಾರ ಮಾಡುತ್ತಿರುವ ಮಾಂಸದಂಗಡಿಗಳಿಂದ ಕೆಲವು ದಿನಗಳಿಂದ ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯುತ್ತಿದ್ದು, ಇದರಿಂದ ಓಡಾಡುತ್ತಿರುವ ಪಾದಾಚಾರಿಗಳು ಮತ್ತು ಅಲ್ಲಿಯೇ ಪಕ್ಕದಲ್ಲಿ ಇತರ ವ್ಯಾಪಾರ ನಡೆಸುತ್ತಿರುವ ಅಂಗಡಿಯವರು ತೊಂದರೆಯನ್ನನ್ನು ಅನುಭವಿಸುತ್ತಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯೂ ಪ್ರಸಾರಗೊಂಡಿತ್ತು. ಇದೀಗ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡು ರಸ್ತೆಯ ಬದಿಗಳಲ್ಲಿ ಹರಿಯುತ್ತಿದ್ದ ನೀರು ಪೈಪ್ ಮೂಲಕ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಮುಖ್ಯಾಧಿಕಾರಿ ಇಂದು ಅವರ ಕಾರ್ಯ ವೈಖರಿಯನ್ನು ಸ್ಥಳೀಯರು ಪ್ರಶಂಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಸಿಬಂದಿ ಸುಧೀಶ್ ಹೆಗ್ಡೆ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…