ಮೂಡುಬಿದಿರೆಯ ಮಾರ್ಕೆಟ್ ನಲ್ಲಿರುವ ಮಾಂಸದಂಗಡಿಗಳಿಂದ ಕಡಿದಿರುವ ಕುರಿ, ಕೋಳಿ, ಆಡುಗಳ ರಕ್ತ ಮತ್ತು ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯದಂತೆ ಮೂಡುಬಿದಿರೆ ಪುರಸಭೆಯ ಅಧಿಕಾರಿಗಳು ಶಾಶ್ವತ ಪರಿಹಾರ ನೀಡಿದ್ದಾರೆ.
ಮಾರ್ಕೆಟಿನಲ್ಲಿ ವ್ಯಾಪಾರ ಮಾಡುತ್ತಿರುವ ಮಾಂಸದಂಗಡಿಗಳಿಂದ ಕೆಲವು ದಿನಗಳಿಂದ ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯುತ್ತಿದ್ದು, ಇದರಿಂದ ಓಡಾಡುತ್ತಿರುವ ಪಾದಾಚಾರಿಗಳು ಮತ್ತು ಅಲ್ಲಿಯೇ ಪಕ್ಕದಲ್ಲಿ ಇತರ ವ್ಯಾಪಾರ ನಡೆಸುತ್ತಿರುವ ಅಂಗಡಿಯವರು ತೊಂದರೆಯನ್ನನ್ನು ಅನುಭವಿಸುತ್ತಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯೂ ಪ್ರಸಾರಗೊಂಡಿತ್ತು. ಇದೀಗ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡು ರಸ್ತೆಯ ಬದಿಗಳಲ್ಲಿ ಹರಿಯುತ್ತಿದ್ದ ನೀರು ಪೈಪ್ ಮೂಲಕ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಮುಖ್ಯಾಧಿಕಾರಿ ಇಂದು ಅವರ ಕಾರ್ಯ ವೈಖರಿಯನ್ನು ಸ್ಥಳೀಯರು ಪ್ರಶಂಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಸಿಬಂದಿ ಸುಧೀಶ್ ಹೆಗ್ಡೆ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…