ಮೂಡುಬಿದಿರೆಯ ಮಾರ್ಕೆಟ್ ನಲ್ಲಿರುವ ಮಾಂಸದಂಗಡಿಗಳಿಂದ ಕಡಿದಿರುವ ಕುರಿ, ಕೋಳಿ, ಆಡುಗಳ ರಕ್ತ ಮತ್ತು ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯದಂತೆ ಮೂಡುಬಿದಿರೆ ಪುರಸಭೆಯ ಅಧಿಕಾರಿಗಳು ಶಾಶ್ವತ ಪರಿಹಾರ ನೀಡಿದ್ದಾರೆ.
ಮಾರ್ಕೆಟಿನಲ್ಲಿ ವ್ಯಾಪಾರ ಮಾಡುತ್ತಿರುವ ಮಾಂಸದಂಗಡಿಗಳಿಂದ ಕೆಲವು ದಿನಗಳಿಂದ ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯುತ್ತಿದ್ದು, ಇದರಿಂದ ಓಡಾಡುತ್ತಿರುವ ಪಾದಾಚಾರಿಗಳು ಮತ್ತು ಅಲ್ಲಿಯೇ ಪಕ್ಕದಲ್ಲಿ ಇತರ ವ್ಯಾಪಾರ ನಡೆಸುತ್ತಿರುವ ಅಂಗಡಿಯವರು ತೊಂದರೆಯನ್ನನ್ನು ಅನುಭವಿಸುತ್ತಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯೂ ಪ್ರಸಾರಗೊಂಡಿತ್ತು. ಇದೀಗ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡು ರಸ್ತೆಯ ಬದಿಗಳಲ್ಲಿ ಹರಿಯುತ್ತಿದ್ದ ನೀರು ಪೈಪ್ ಮೂಲಕ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಮುಖ್ಯಾಧಿಕಾರಿ ಇಂದು ಅವರ ಕಾರ್ಯ ವೈಖರಿಯನ್ನು ಸ್ಥಳೀಯರು ಪ್ರಶಂಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಸಿಬಂದಿ ಸುಧೀಶ್ ಹೆಗ್ಡೆ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…