ಜನ ಮನದ ನಾಡಿ ಮಿಡಿತ

Advertisement

ʼಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಕಡ್ಡಾಯವಾಗಿ ಸರಕಾರದ ನಿಯಮಗಳನ್ನು ಪಾಲಿಸಬೇಕುʼ; ಎಸ್.ಐ.ಹರೀಶ್ ನೇತೃತ್ವದಲ್ಲಿ ಪ್ರಮುಖರ ಸಭೆ

ಸೆ. 19 ರಂದು ನಡೆಯಲಿರುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತೃತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆದಿದೆ. ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಪಾಲಿಸಬೇಕಾದ ಸರಕಾರದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.


ತಾಲೂಕಿನಲ್ಲಿ ನಡೆಯುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಿದ್ದವಿದೆ. ಅಂತಹ ಸಂಗತಿಗಳು ಕಂಡುಬಂದರೆ ಪೋಲೀಸ್ ಇಲಾಖೆಗೆ ತಿಳಿಸುವಂತೆ ಮನವಿ ಮಾಡಿದರು.

ಗಣೇಶನ ಹಬ್ಬದ ವಿವಿಧ ಕಾರ್ಯಗಳು ಶಾಂತಿಯುತವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ರಾತ್ರಿ 10 ಗಂಟೆಯ ಒಳಗೆ ಪ್ರತಿ ದಿನದ ಕಾರ್ಯಕ್ರಮ ಮುಗಿಸಬೇಕು. ಗಣೇಶನ ವಿಗ್ರಹವನ್ನು ಇಡುವ ಚೌಕಿ ಅಥವಾ ಸಭಾ ವೇದಿಕೆಯಲ್ಲಿ ರಾತ್ರಿ ಪಾಳಿಯಲ್ಲಿ ಸ್ವಯಂ ಸೇವಕರು ಕಾಯಬೇಕು.


ಗಣೇಶ ಹಬ್ವಕ್ಕೆ ಶುಭಕೋರುವ ಬ್ಯಾನರ್ ಗಳನ್ನು ಹಾಕಿದರೆ ಎಲ್ಲೂ ಕೂಡ ಯಾವುದೇ ವಿವಾದವಾಗದಂತೆ ಜವಾಬ್ದಾರಿ ವಹಿಸಬೇಕು.
ಪಂಚಾಯತ್ ನಿಂದ, ಮೆಸ್ಕಾಂ, ಅಗ್ನಿಶಾಮಕ ದಳದ ಅನುಮತಿಯನ್ನು ಪಡೆದುಕೊಳ್ಳಿ, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿ.ಟಿ.ವಿ ಅಳವಡಿಸಿ, ಮೆರವಣಿಗೆ ವೇಳೆ ಡಿ.ಜೆ.ಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಎಸ್.ಐ.ಮೂರ್ತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!