ಸೆ. 19 ರಂದು ನಡೆಯಲಿರುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತೃತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆದಿದೆ. ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಪಾಲಿಸಬೇಕಾದ ಸರಕಾರದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ತಾಲೂಕಿನಲ್ಲಿ ನಡೆಯುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಿದ್ದವಿದೆ. ಅಂತಹ ಸಂಗತಿಗಳು ಕಂಡುಬಂದರೆ ಪೋಲೀಸ್ ಇಲಾಖೆಗೆ ತಿಳಿಸುವಂತೆ ಮನವಿ ಮಾಡಿದರು.
ಗಣೇಶನ ಹಬ್ಬದ ವಿವಿಧ ಕಾರ್ಯಗಳು ಶಾಂತಿಯುತವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ರಾತ್ರಿ 10 ಗಂಟೆಯ ಒಳಗೆ ಪ್ರತಿ ದಿನದ ಕಾರ್ಯಕ್ರಮ ಮುಗಿಸಬೇಕು. ಗಣೇಶನ ವಿಗ್ರಹವನ್ನು ಇಡುವ ಚೌಕಿ ಅಥವಾ ಸಭಾ ವೇದಿಕೆಯಲ್ಲಿ ರಾತ್ರಿ ಪಾಳಿಯಲ್ಲಿ ಸ್ವಯಂ ಸೇವಕರು ಕಾಯಬೇಕು.
ಗಣೇಶ ಹಬ್ವಕ್ಕೆ ಶುಭಕೋರುವ ಬ್ಯಾನರ್ ಗಳನ್ನು ಹಾಕಿದರೆ ಎಲ್ಲೂ ಕೂಡ ಯಾವುದೇ ವಿವಾದವಾಗದಂತೆ ಜವಾಬ್ದಾರಿ ವಹಿಸಬೇಕು.
ಪಂಚಾಯತ್ ನಿಂದ, ಮೆಸ್ಕಾಂ, ಅಗ್ನಿಶಾಮಕ ದಳದ ಅನುಮತಿಯನ್ನು ಪಡೆದುಕೊಳ್ಳಿ, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿ.ಟಿ.ವಿ ಅಳವಡಿಸಿ, ಮೆರವಣಿಗೆ ವೇಳೆ ಡಿ.ಜೆ.ಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಎಸ್.ಐ.ಮೂರ್ತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…