ಸೆ. 19 ರಂದು ನಡೆಯಲಿರುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತೃತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆದಿದೆ. ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಪಾಲಿಸಬೇಕಾದ ಸರಕಾರದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ತಾಲೂಕಿನಲ್ಲಿ ನಡೆಯುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಿದ್ದವಿದೆ. ಅಂತಹ ಸಂಗತಿಗಳು ಕಂಡುಬಂದರೆ ಪೋಲೀಸ್ ಇಲಾಖೆಗೆ ತಿಳಿಸುವಂತೆ ಮನವಿ ಮಾಡಿದರು.
ಗಣೇಶನ ಹಬ್ಬದ ವಿವಿಧ ಕಾರ್ಯಗಳು ಶಾಂತಿಯುತವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ರಾತ್ರಿ 10 ಗಂಟೆಯ ಒಳಗೆ ಪ್ರತಿ ದಿನದ ಕಾರ್ಯಕ್ರಮ ಮುಗಿಸಬೇಕು. ಗಣೇಶನ ವಿಗ್ರಹವನ್ನು ಇಡುವ ಚೌಕಿ ಅಥವಾ ಸಭಾ ವೇದಿಕೆಯಲ್ಲಿ ರಾತ್ರಿ ಪಾಳಿಯಲ್ಲಿ ಸ್ವಯಂ ಸೇವಕರು ಕಾಯಬೇಕು.
ಗಣೇಶ ಹಬ್ವಕ್ಕೆ ಶುಭಕೋರುವ ಬ್ಯಾನರ್ ಗಳನ್ನು ಹಾಕಿದರೆ ಎಲ್ಲೂ ಕೂಡ ಯಾವುದೇ ವಿವಾದವಾಗದಂತೆ ಜವಾಬ್ದಾರಿ ವಹಿಸಬೇಕು.
ಪಂಚಾಯತ್ ನಿಂದ, ಮೆಸ್ಕಾಂ, ಅಗ್ನಿಶಾಮಕ ದಳದ ಅನುಮತಿಯನ್ನು ಪಡೆದುಕೊಳ್ಳಿ, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿ.ಟಿ.ವಿ ಅಳವಡಿಸಿ, ಮೆರವಣಿಗೆ ವೇಳೆ ಡಿ.ಜೆ.ಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಎಸ್.ಐ.ಮೂರ್ತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…