ಸೆ. 19 ರಂದು ನಡೆಯಲಿರುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತೃತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆದಿದೆ. ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಪಾಲಿಸಬೇಕಾದ ಸರಕಾರದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ತಾಲೂಕಿನಲ್ಲಿ ನಡೆಯುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಿದ್ದವಿದೆ. ಅಂತಹ ಸಂಗತಿಗಳು ಕಂಡುಬಂದರೆ ಪೋಲೀಸ್ ಇಲಾಖೆಗೆ ತಿಳಿಸುವಂತೆ ಮನವಿ ಮಾಡಿದರು.
ಗಣೇಶನ ಹಬ್ಬದ ವಿವಿಧ ಕಾರ್ಯಗಳು ಶಾಂತಿಯುತವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ರಾತ್ರಿ 10 ಗಂಟೆಯ ಒಳಗೆ ಪ್ರತಿ ದಿನದ ಕಾರ್ಯಕ್ರಮ ಮುಗಿಸಬೇಕು. ಗಣೇಶನ ವಿಗ್ರಹವನ್ನು ಇಡುವ ಚೌಕಿ ಅಥವಾ ಸಭಾ ವೇದಿಕೆಯಲ್ಲಿ ರಾತ್ರಿ ಪಾಳಿಯಲ್ಲಿ ಸ್ವಯಂ ಸೇವಕರು ಕಾಯಬೇಕು.
ಗಣೇಶ ಹಬ್ವಕ್ಕೆ ಶುಭಕೋರುವ ಬ್ಯಾನರ್ ಗಳನ್ನು ಹಾಕಿದರೆ ಎಲ್ಲೂ ಕೂಡ ಯಾವುದೇ ವಿವಾದವಾಗದಂತೆ ಜವಾಬ್ದಾರಿ ವಹಿಸಬೇಕು.
ಪಂಚಾಯತ್ ನಿಂದ, ಮೆಸ್ಕಾಂ, ಅಗ್ನಿಶಾಮಕ ದಳದ ಅನುಮತಿಯನ್ನು ಪಡೆದುಕೊಳ್ಳಿ, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿ.ಟಿ.ವಿ ಅಳವಡಿಸಿ, ಮೆರವಣಿಗೆ ವೇಳೆ ಡಿ.ಜೆ.ಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಅಪರಾಧ ವಿಭಾಗದ ಎಸ್.ಐ.ಮೂರ್ತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…